Advertisement

ಶ್ರೀರಂಗಪಟ್ಟಣದ ಬಳಿ ಕಾವೇರಿ ಪ್ರವಾಹದಲ್ಲಿ ಕೊಚ್ಚಿ ಹೋಗುತ್ತಿದ್ದ ಪ್ರವಾಸಿಗನ ರಕ್ಷಣೆ

07:25 PM Jul 10, 2022 | Team Udayavani |

ಶ್ರೀರಂಗಪಟ್ಟಣ: ಇಲ್ಲಿನ ಪ್ರವಾಸಿ ತಾಣ ಬೆಳಗೊಳದ ಬಲಮುರಿಯಲ್ಲಿ ಕಾವೇರಿ ನದಿ ಪ್ರವಾಹದಲ್ಲಿ ಕೊಚ್ಚಿ ಹೋಗುತ್ತಿದ್ದ ಪ್ರವಾಸಿಗನೊಬ್ಬನನ್ನು ರಕ್ಷಿಸಿದ ಘಟನೆ ಭಾನುವಾರ ನಡೆದಿದೆ.

Advertisement

ಸ್ಥಳೀಯ ಯುವಕ ಪ್ರಶಾಂತ್ ಹಾಗೂ ಇತರರು ಪ್ರಾಣದ ಹಂಗು ತೊರೆದು ತುಂಬಿ ಹರಿಯುತ್ತಿದ್ದ ನದಿಗೆ ಧುಮುಕಿ ಕೊಚ್ಚಿ ಹೋಗುತ್ತಿದ್ದ ಪ್ರವಾಸಿಗನ್ನು ರಕ್ಷಣೆ ಮಾಡಿದ್ದಾರೆ.

ಸ್ಥಳೀಯರ ನೆರವಿನೊಂದಿಗೆ ಹಗ್ಗದ ಸಹಾಯದಿಂದ ಕೊಚ್ಚಿ ಹೋಗುತ್ತಿದ್ದ ಯುವಕನ ರಕ್ಷಿಸಿ ಯುವಕರ ತಂಡ ಮಾನವೀಯತೆ ಮೆರೆದಿದ್ದಾರೆ

ಸ್ಥಳೀಯ ಯುವಕರ ಧೈರ್ಯದ ಸಾಹಸಕ್ಕೆ ಸ್ಥಳೀಯರಿಂದ ಪ್ರಶಂಸೆ ವ್ಯಕ್ತವಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next