Advertisement

ಕೊನೆಗೂ ಆಲೇಖಾನ್ ಹೊರಟ್ಟಿ ಗ್ರಾಮಸ್ಥರ ರಕ್ಷಣೆ

08:29 AM Aug 12, 2019 | keerthan |

ಚಿಕ್ಕಮಗಳೂರು: ಕಳೆದ ಕೆಲವು ದಿನಗಳಿಂದ ಸಮಸ್ಯೆಯಲ್ಲಿದ್ದ ಆಲೇಖಾನ್ ಹೊರಟ್ಟಿ ಗ್ರಾಮಸ್ಥರನ್ನು ಕೊನೆಗೂ ರಕ್ಷಣೆ ಮಾಡಲಾಗಿದೆ. ರಕ್ಷಣಾ ಪಡೆಯ ಯೋಧರಿಂದ ಸುಮಾರು 78 ಜನರನ್ನು ರಕ್ಷಣೆ ಮಾಡಲಾಗಿದೆ.

Advertisement

ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಆಲೇಖಾನ್ ಹೊರಟ್ಟಿ ಗ್ರಾಮದಲ್ಲಿ ಸತತ ಗುಡ್ಡ ಕುಸಿತದಿಂದಾಗಿ ಹಲವಾರು ಕುಟುಂಬಗಳು ತೊಂದರೆಗೊಳಗಾಗಿದ್ದವು.

ಶನಿವಾರ ಇಲ್ಲಿ ತೆರಳಿದ್ದ ರಕ್ಷಣಾ ಪಡೆಯವರು ಕೂಡ ಸಂಕಷ್ಟದಲ್ಲಿ ಸಿಲುಕಿದ್ದರು. ಇಂದು ಎಲ್ಲಾ ಗ್ರಾಮಸ್ಥರನ್ನು ರಕ್ಷಣೆ ಮಾಡಿದ ಯೋಧರು, ಕೆಲವರನ್ನು ಹೊತ್ತುಕೊಂಡು ಬಂದರು. ಐದಾರು ಕಿ.ಮೀ ನಡೆದುಕೊಂಡು ಸಂತ್ರಸ್ತರನ್ನು ಸುರಕ್ಷಿತ ಸ್ಥಳಕ್ಕೆ ಕರೆತಂದರು.

ರಕ್ಷಿಸಲ್ಪಟ್ಟವರನ್ನು ಕೊಟ್ಟಿಗೆಹಾರದ ನಿರಾಶ್ರಿತರ ಕೇಂದ್ರಕ್ಕೆ ದಾಖಲಿಸಲಾಗಿದೆ.

Advertisement

Advertisement

Udayavani is now on Telegram. Click here to join our channel and stay updated with the latest news.

Next