Advertisement

ಸಿಂಧನೂರಲ್ಲಿ ಅಪಹರಿಸಲ್ಪಟ್ಟ ಮಹಾರಾಷ್ಟ್ರದ ನಾಲ್ವರು ವಿದ್ಯಾರ್ಥಿಗಳ ರಕ್ಷ ಣೆ; ಇಬ್ಬರ ಬಂಧನ

06:02 PM Oct 02, 2024 | Team Udayavani |

ಉದಯವಾಣಿ ಸಮಾಚಾರ
ಸಿಂಧನೂರು: ಹಣಕ್ಕಾಗಿ ಮಹಾರಾಷ್ಟ್ರದಿಂದ ನಾಲ್ವರು ವಿದ್ಯಾರ್ಥಿಗಳನ್ನು ಅಪಹರಣ ಮಾಡಿಕೊಂಡು ಬಂದು ತಾಲೂಕಿನ ಕುನ್ನಟಗಿ ಕ್ಯಾಂಪ್‌ನಲ್ಲಿ ಇರಿಸಿದ್ದ ಆರೋಪಿಗಳನ್ನು ಮಹಾರಾಷ್ಟ್ರ ಹಾಗೂ ಸಿಂಧನೂರು ಗ್ರಾಮೀಣ ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿ ಬಂಧಿಸಿ ವಿದ್ಯಾರ್ಥಿಗಳನ್ನು ರಕ್ಷಿಸಿದ್ದಾರೆ.

Advertisement

ಇಬ್ಬರು ಆರೋಪಿಗಳನ್ನು ಬಂಧಿಸಿದ್ದು, ಇನ್ನಿಬ್ಬರು ಪರಾರಿಯಾಗಿದ್ದಾರೆ. ಮಹಾರಾಷ್ಟ್ರದ ಪುಣೆಯ ಓಂಕಾರ, ಕೃಷ್ಣ, ಶುಭಂ ಪಾಂಡೆ, ಸ್ವಂಪ್ನಿ ಪಾಟೀಲ್‌ ಅಪಹರಣಕ್ಕೊಳಗಾದ ವಿದ್ಯಾರ್ಥಿಗಳು. ಆರೋಪಿಗಳಾದ ದತ್ತು, ರಾಮು ಸೆರೆ ಸಿಕ್ಕಿದ್ದಾರೆ. ಪುಣೆ ಪೊಲೀಸರು ಆರೋಪಿಗಳ ಮೊಬೈಲ್‌ ಜಾಲ ಹಿಡಿದು ಆಗಮಿಸಿದ್ದರು.

ರಕ್ಷಣೆಗೆ ಮುಂದಾದ ಮಹಾರಾಷ್ಟ್ರ ಪೊಲೀಸರ ಮೇಲೆ ಪಿಸ್ತೂಲ್‌ ಹಾಗೂ ಮಾರಾಕಾಸ್ತ್ರಗಳಿಂದ ದಾಳಿ ನಡೆಸಲು ಯತ್ನಿಸಿದ್ದಾರೆ. ಆಗ ಸಿಂಧನೂರು ಗ್ರಾಮೀಣ ಠಾಣೆಗೆ ಮಾಹಿತಿ ನೀಡಿದ್ದು, ಸಿಪಿಐ ವೀರಾರೆಡ್ಡಿ, ಪಿಎಸೈ ಮಹಮ್ಮದ್‌ ಇಸಾಕ್‌ ನೆರವಿನಲ್ಲಿ
ಕಾರ್ಯಾಚರಣೆ ಮಾಡಿದ್ದಾರೆ. ಪ್ರತಿಯೊಬ್ಬ ವಿದ್ಯಾರ್ಥಿಗೆ 50 ಲಕ್ಷದಂತೆ ನಾಲ್ವರು ವಿದ್ಯಾರ್ಥಿಗಳಿಗೆ ಒಟ್ಟು ಎರಡು ಕೋಟಿ
ಹಣದ ಬೇಡಿಕೆ ಇಟ್ಟಿದ್ದರು ಎಂದು ತಿಳಿದು ಬಂದಿದೆ.

Advertisement

Udayavani is now on Telegram. Click here to join our channel and stay updated with the latest news.

Next