Advertisement

ಆಹಾರ ಅರಸಿ ನಾಡಿಗೆ ಬಂದು ಬಾವಿಗೆ ಬಿದ್ದ ಕಡವೆಯ ರಕ್ಷಣೆ

09:29 AM Sep 11, 2019 | sudhir |

ಚಿಕ್ಕಮಗಳೂರು : ಆಹಾರ ಅರಸಿಕೊಂಡು ಕಾಡಿನಿಂದ ನಾಡಿಗೆ ಬಂದ ಕಡವೆಯೊಂದು ಬಾವಿಗೆ ಬಿದ್ದು ಅರಣ್ಯ ಇಲಾಖೆ ಸಿಬ್ಬಂದಿಗಳು ರಕ್ಷಿಸಿದ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನ ಕೊಗ್ರೆ ಗ್ರಾಮದಲ್ಲಿ ಸಂಭವಿಸಿದೆ.

Advertisement

ಆಹಾರ ಅರಸಿ ಬಂದ ಕಡವೆ ಆಕಸ್ಮಿಕವಾಗಿ ಬಾವಿಗೆ ಬಿದ್ದಿದೆ ಪರಿಣಾಮ ಕಡವೆಯ ಒಂದು ಕಾಲು ಮುರಿತಕ್ಕೊಳಗಾಗಿದೆ, ಬಾವಿಯಿಂದ ಮೇಲೆ ಬರಲು ಒದ್ದಾಡುತಿದ್ದ ಕಡವೆಯನ್ನು ಅರಣ್ಯ ಇಲಾಖೆಯ ಸಿಬ್ಬಂದಿಗಳು ಹಾಗೂ ಸ್ಥಳೀಯರು ಹರಸಾಹಸ ಪಟ್ಟು ರಕ್ಷಿಸಲಾಗಿದೆ.

ಕಾಲು ಮುರಿತಕ್ಕೊಳಗಾದ ಕಡವೆಗೆ ಪಶು ವೈದ್ಯರಿಂದ ಚಿಕಿತ್ಸೆ ನೀಡಲಾಗಿದೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next