Advertisement

ಹಳ್ಳದ ನೀರಿನಲ್ಲಿ ಕೊಚ್ಚಿ ಹೋಗುತ್ತಿದ್ದ ವಿದ್ಯಾರ್ಥಿಗಳ ರಕ್ಷಿಸಿದ

11:38 AM Sep 10, 2017 | Team Udayavani |

ಆಳಂದ: ಉಕ್ಕಿ ಹರಿದ ಕಣ್ಮಸ್‌ ಗ್ರಾಮದ ಹಳ್ಳದ ನೀರಿನಲ್ಲಿ ಕೊಚ್ಚಿ ಹೋಗುತ್ತಿದ್ದ ಇಬ್ಬರು ವಿದ್ಯಾರ್ಥಿಗಳು ಗ್ರಾಮಸ್ಥರ ಸಹಾಯದಿಂದ ಪಾರಾದ ಘಟನೆ ಶುಕ್ರವಾರ ಸಂಜೆ ತಾಲೂಕಿನ ವಳವಂಡವಾಡಿ ಗ್ರಾಮದಲ್ಲಿ ನಡೆದಿದೆ.
8ನೇ ತರಗತಿ ವಿದ್ಯಾರ್ಥಿ ಚನ್ನವೀರ ಚಿಂಚೋಳಿ, ಎಸ್ಸೆಸ್ಸೆಲ್ಸಿ ವಿದ್ಯಾರ್ಥಿ ಮಹೇಶ ಅಟ್ಟೂರೆ ಎಂಬುವರು ಕಣ್ಮಸ್‌ ಹಳ್ಳದ ನೀರಿನಲ್ಲಿ ಕೊಚ್ಚಿ ಹೋಗುತ್ತಿದ್ದರು.

Advertisement

ಇದನ್ನು ಗಮನಿಸಿದ ಗ್ರಾಮಸ್ಥರು ಇವರನ್ನು ರಕ್ಷಿಸಿದರು. ಶುಕ್ರವಾರ ಮಧ್ಯಾಹ್ನ 4:30ರ ಸುಮಾರಿಗೆ ವಳವಂಡವಾಡಿ ಗ್ರಾಮದ ಸೇತುವೆ ಉಕ್ಕಿ ಹರಿದ ಪರಿಣಾಮ ರಾತ್ರಿ 9:00 ಗಂಟೆಯವರೆಗೆ ವಿದ್ಯಾರ್ಥಿಗಳು ರಸ್ತೆಯ ಮೇಲೆಯೇ ಕಾಯ್ದು
ನಿಲ್ಲುವಂತಾಗಿತ್ತು. ರಾತ್ರಿ 9:00 ಗಂಟೆ ಸುಮಾರಿಗೆ ನೀರಿನ ಹರಿವು ಕುಗ್ಗಿದ ಮೇಲೆ ಮನೆ ಸೇರಿದೆವು ಎಂದು ವಿದ್ಯಾರ್ಥಿಗಳು ತಿಳಿಸಿದರು. 

ಸಂಚಾರಕ್ಕೆ ತೊಂದರೆ: ಆಗಾಗ ಸುರಿಯುತ್ತಿರುವ ಮಳೆಯಿಂದಾಗಿ ತಾಲೂಕಿನ ನಿಂಬರಗಾ ಆಳಂದ ರಸ್ತೆ, ನಿರುಗಡಿ ಮತ್ತು ಆಳಂದ ರಸ್ತೆ, ವಳವಂಡವಾಡಿ-ತಡಕಲ್‌ ರಸ್ತೆ, ತೀರ್ಥ ಸಾಲೇಗಾಂವ ರಸ್ತೆ ಗುಂಡಿಗಳಲ್ಲಿ ನೀರು ನಿಂತು
ಸಂಚಾರಕ್ಕೆ ಪರದಾಡುವಂತೆ ಆಗಿದೆ. ರಸ್ತೆಗಳು ಹದಗೆಟ್ಟಿವೆ. ರಸ್ತೆ ನಿರ್ಮಾಣವಾಗದೆ ಇರುವುದರಿಂದ ಸಾರಿಗೆ ಸಂಸ್ಥೆಯ ಬಸ್‌ ಸಂಚಾರ ಸ್ಥಗಿತಗೊಂಡಿದೆ. ಶಾಲೆ-ಕಾಲೇಜಿನ ವಿದ್ಯಾರ್ಥಿಗಳು ಮತ್ತು ಗ್ರಾಮಸ್ಥರಿಗೆ ಪ್ರಯಾಣಕ್ಕೆ ತೊಂದರೆಯಾಗಿ ಪರದಾಡುವಂತೆ ಆಗಿದೆ ಎಂದು ಗ್ರಾಮದ ಭಾಗ್ಯವಂತ ಪೂಜಾರಿ ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next