Advertisement

ಮೀಸಲು ಅಧಿಸೂಚನೆ: ಹೈಕೋರ್ಟ್‌ ನಿರ್ದೇಶನ

11:13 PM Mar 17, 2020 | Lakshmi GovindaRaj |

ಬೆಂಗಳೂರು: ರಾಜ್ಯದ 58 ನಗರಸಭೆ, 117 ಪುರಸಭೆ ಹಾಗೂ 93 ಪ.ಪಂ. ಸೇರಿ 268 ನಗರ ಸ್ಥಳೀಯ ಸಂಸ್ಥೆಗಳ ಅಧ್ಯಕ್ಷ-ಉಪಾಧ್ಯಕ್ಷರ ಸ್ಥಾನಗಳಿಗೆ ಮೀಸಲಾತಿ ನಿಗದಿಪಡಿಸಿ 2020ರ ಮಾ.11ರಂದು ಹೊರಡಿಸಿದ ಅಧಿಸೂಚನೆ ಸಂಬಂಧ ಸದ್ಯ ಯಾವುದೇ ಕ್ರಮಕ್ಕೆ ಮುಂದಾಗದಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌ ನಿರ್ದೇಶಿಸಿದೆ.

Advertisement

ಇದರಿಂದಾಗಿ ಚುನಾವಣೆ ನಡೆದು 17 ತಿಂಗಳಿಂದ ನನೆಗುದಿಗೆ ಬಿದ್ದಿರುವ ನಗರ ಸ್ಥಳೀಯ ಸಂಸ್ಥೆಗಳ ಅಧ್ಯಕ್ಷ-ಉಪಾಧ್ಯಕ್ಷರ ಆಯ್ಕೆ ಮತ್ತಷ್ಟು ವಿಳಂಬವಾ ಗಲಿದೆ. ಹೊಸ ಅಧಿಸೂಚನೆಯಲ್ಲಿ ರಾಯಚೂರು ಜಿಲ್ಲೆ ಸಿಂಧನೂರು ನಗರಸಭೆಯ ಅಧ್ಯಕ್ಷ ಸ್ಥಾನದ ಮೀಸಲಾತಿ ಯನ್ನು ಎಸ್ಟಿ (ಮಹಿಳೆ) ಕೆಟಗರಿಗೆ ನಿಗದಿಪಡಿಸಿರು ವುದನ್ನು ಪ್ರಶ್ನಿಸಿ ಸ್ಥಳೀಯ ನಗರಸಭೆ ಸದಸ್ಯ ಆಲಂ ಬಾಷಾ ಸಲ್ಲಿಸಿರುವ ಅರ್ಜಿಯು ನ್ಯಾ. ಪಿ.ಬಿ. ಭಜಂತ್ರಿ ಅವರಿದ್ದ ಏಕಸದಸ್ಯ ನ್ಯಾಯಪೀಠದ ಮುಂದೆ ಮಂಗಳವಾರ ವಿಚಾರಣೆಗೆ ಬಂದಿತ್ತು.

ವಾದ ಆಲಿಸಿದ ನ್ಯಾಯಪೀಠ, ಸಿಂಧನೂರು ನಗರ ಸಭೆ ಅಧ್ಯಕ್ಷ ಹುದ್ದೆ ಮೀಸಲು ಸೇರಿ ರಾಜ್ಯದ ಎಲ್ಲಾ ನಗರ ಸ್ಥಳೀಯ ಸಂಸ್ಥೆಗಳ ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನಗಳಿಗೆ ಮೀಸಲಾತಿ ನಿಗದಿಪಡಿಸಿ ಹೊರಡಿಸಲಾಗಿರುವ ಅಧಿ ಸೂಚನೆಗೆ ಸಂಬಂಧಿಸಿದಂತೆ ಸದ್ಯ ಯಾವುದೇ ಕ್ರಮ ಜರುಗಿಸದಂತೆ ರಾಜ್ಯ ಸರ್ಕಾರಕ್ಕೆ ನಿರ್ದೇಶಿಸಿ ವಿಚಾರಣೆ ಯನ್ನು ಏ.1ಕ್ಕೆ ಮುಂದೂಡಿತು.

Advertisement

Udayavani is now on Telegram. Click here to join our channel and stay updated with the latest news.

Next