Advertisement

ಮೀಸಲಾತಿ ರಾಜಕೀಯದಾಟದ ದಾಳ ಮಾಡಬಾರದು: Siddaramaiah

10:08 PM Apr 25, 2023 | Team Udayavani |

ಬೆಂಗಳೂರು: ಮುಸ್ಲಿಮರ 2 ಬಿ ಮೀಸಲಾತಿ ರದ್ದುಪಡಿಸಿದ ವಿಚಾರದಲ್ಲಿ ಸುಪ್ರೀಂಕೋರ್ಟ್‌ ವ್ಯಕ್ತಪಡಿಸಿರುವ ಅಭಿಪ್ರಾಯ ಆಧರಿಸಿ ಸರ್ಕಾರದ ವಿರುದ್ಧ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ವಾಗ್ಧಾಳಿ ನಡೆಸಿದ್ದಾರೆ.

Advertisement

ಈ ಕುರಿತು ಟ್ವೀಟ್‌ ಮಾಡಿರುವ ಸಿದ್ದರಾಮಯ್ಯ, ಈಗಲೂ ಕಾಲ ಮಿಂಚಿಲ್ಲ. ರಾಜ್ಯ ಬಿಜೆಪಿ ಸರ್ಕಾರ ತಕ್ಷಣ ಮುಸ್ಲಿಂ ಮೀಸಲಾತಿ ರದ್ದತಿಯ ಆದೇಶವನ್ನು ಹಿಂದೆಗೆದುಕೊಂಡು ತನ್ನ ತಪ್ಪನ್ನು ಒಪ್ಪಿಕೊಳ್ಳಬೇಕು. ಮೀಸಲಾತಿಯನ್ನು ರಾಜಕೀಯದಾಟದ ದಾಳವನ್ನಾಗಿ ಮಾಡಬಾರದು ಎಂದು ಆಗ್ರಹಿಸಿದ್ದಾರೆ.

ಬಿಜೆಪಿ ಪ್ರಕಟಿಸಿರುವ ಪರಿಷ್ಕೃತ ಮೀಸಲಾತಿ ನೀತಿಯಲ್ಲಿ ಮುಸ್ಲಿಂಮರ ವಿರುದ್ಧದ ದ್ವೇಷದ ರಾಜಕೀಯ ದುರುದ್ದೇಶ ಇತ್ತೇ ಹೊರತು, ಪ್ರಾಮಾಣಿಕತೆ ಇರಲಿಲ್ಲ. ಯಾವುದೇ ಸಮೀಕ್ಷೆ- ಅಂಕಿ ಅಂಶದ ಆಧಾರವಿಲ್ಲದ ಈ ಮೀಸಲಾತಿ ಸಹಜ ಸಾವಿಗೀಡಾಗುವುದು ಖಂಡಿತ.

ಮುಸ್ಲಿಂ ಮೀಸಲಾತಿ ರದ್ದತಿಗೆ ತಡೆಯಾಜ್ಞೆ ನೀಡಿರುವುದು ರಾಜ್ಯ ಬಿಜೆಪಿ ಸರ್ಕಾರಕ್ಕೆ ಸುಪ್ರೀಂ ಕೋರ್ಟ್‌ ಮಾಡಿರುವ ಕಪಾಳಮೋಕ್ಷವಾಗಿದೆ. ಈ ತಡೆಯಾಜ್ಞೆ ತಾತ್ಕಾಲಿಕವಾಗಿದ್ದರೂ ಇದೇ ಖಾಯಂ ಆದೇಶ ಆಗುವುದು ಖಂಡಿತ ಎಂದು ಹೇಳಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next