Advertisement

ಖಾಸಗಿ ಬ್ಯಾಂಕುಗಳಿಂದ ಠೇವಣಿ ವರ್ಗಾಯಿಸದಂತೆ ಠೇವಣಿದಾರರಿಗೆ ಆರ್.ಬಿ.ಐ. ಮನವಿ

10:04 AM Mar 14, 2020 | Hari Prasad |

ಹೊಸದಿಲ್ಲಿ: ಖಾಸಗಿ ಬ್ಯಾಂಕುಗಳಲ್ಲಿರುವ ನಿಮ್ಮ ಠೇವಣಿಗಳು ಸುರಕ್ಷಿತವಾಗಿರಲಿವೆ. ಈ ಹಣವನ್ನು ಸರಕಾರಿ ಸ್ವಾಮ್ಯದ ಬ್ಯಾಂಕ್‌ಗಳಿಗೆ ವರ್ಗಾಯಿಸಬೇಡಿ ಎಂದು ಭಾರತೀಯ ರಿಸರ್ವ್‌ ಬ್ಯಾಂಕ್‌ (ಆರ್‌.ಬಿ.ಐ.) ಮನವಿ ಮಾಡಿದೆ.

Advertisement

ಈ ಸಂಬಂಧ ಎಲ್ಲ ರಾಜ್ಯಗಳ ಮುಖ್ಯ ಕಾರ್ಯದರ್ಶಿಗಳಿಗೆ ಆರ್‌.ಬಿ.ಐ. ಸುತ್ತೋಲೆ ಹೊರಡಿಸಿದ್ದು, ಖಾಸಗಿ ಬ್ಯಾಂಕ್‌ಗಳಲ್ಲಿ ನೀವು ಇರಿಸಿರುವ ಹಣವನ್ನು ವರ್ಗಾವಣೆ ಮಾಡಿದರೆ, ಬ್ಯಾಂಕಿಂಗ್‌ ಹಾಗೂ ಹಣಕಾಸು ಕ್ಷೇತ್ರದ ಸ್ಥಿರತೆ ಮೇಲೆ ವ್ಯತಿರಿಕ್ತ ಪರಿಣಾಮ ಬೀರುತ್ತದೆ. ಹೀಗಾಗಿ ಇಂತಹ ನಿರ್ಧಾರಗಳನ್ನು ಕೈಗೊಳ್ಳಬೇಡಿ ಎಂದಿದೆ.

ಖಾಸಗಿ ಬ್ಯಾಂಕ್‌ಗಳಲ್ಲಿನ ಠೇವಣಿಗಳು ಭಾರೀ ಪ್ರಮಾಣದಲ್ಲಿ ದುರುಪಯೋಗ ಆಗುತ್ತಿರುವುದರ ಕುರಿತು ಆರ್‌ಬಿಐ ಆತಂಕ ವ್ಯಕ್ತಪಡಿಸಿದ್ದು, ಇದು ಬ್ಯಾಂಕಿಂಗ್‌ ವ್ಯವಸ್ಥೆಯನ್ನು ಅಸ್ಥಿರಗೊಳಿಸುತ್ತದೆ ಎಂದೂ ತಿಳಿಸಿದೆ. ಖಾಸಗಿ ಬ್ಯಾಂಕ್‌ಗಳನ್ನು ನಿಯಂತ್ರಿಸುವ ವಿಶೇಷ ಅಧಿಕಾರ ಆರ್‌ಬಿಐಗೆ ಇದೆ. ಆ ಅಧಿಕಾರವನ್ನು ಬಳಸಲಾಗುವುದು. ಹೀಗಾಗಿ ನಿಮ್ಮ ಠೇವಣಿ ಸುರಕ್ಷಿತವಾಗಿದೆ. ಯಾವುದೇ ಕಾರಣಕ್ಕೂ ವರ್ಗಾಯಿಸಬೇಡಿ ಎಂದು ಕೋರಿದೆ.

Advertisement

Udayavani is now on Telegram. Click here to join our channel and stay updated with the latest news.

Next