Advertisement

ಕನ್ನಡ ಕಲಿಕೆಗೆ ಮೀಸಲು ನಿಶ್ಚಿತ

10:57 PM Aug 21, 2021 | Team Udayavani |

ಧಾರವಾಡ: ಕನ್ನಡದಲ್ಲೇ ತಾಂತ್ರಿಕ ಶಿಕ್ಷಣ ನೀಡುತ್ತಿದ್ದು, ಇದರಲ್ಲಿ ಕಲಿತವರಿಗೆ ಉದ್ಯೋಗ ಮತ್ತು ಉನ್ನತ ಶಿಕ್ಷಣದಲ್ಲಿ ರಿಯಾಯಿತಿ ಅಥವಾ ಮೀಸಲು ನೀಡಲಾಗುವುದು ಎಂದು ಉನ್ನತ ಶಿಕ್ಷಣ ಸಚಿವ ಡಾ| ಸಿ.ಎನ್‌.ಅಶ್ವತ್ಥನಾರಾಯಣ ಹೇಳಿದರು.

Advertisement

ಕವಿವಿಯಲ್ಲಿ ಶನಿವಾರ ರಾಷ್ಟ್ರೀಯ ಶಿಕ್ಷಣ ನೀತಿ ಕುರಿತು ನಡೆದ ಸಾಹಿತಿಗಳೊಂದಿಗಿನ ಸಂವಾದದಲ್ಲಿ ಮಾತನಾಡಿದ ಅವರು, ಸ್ಥಳೀಯ ಭಾಷೆಯಲ್ಲಿ ತಾಂತ್ರಿಕ ಶಿಕ್ಷಣ ಕೊಡಬೇಕಾದರೆ ಹೆಚ್ಚು ಬಂಡವಾಳ  ಹೂಡಬೇಕು. ಇದಕ್ಕೆ ತಂತ್ರಜ್ಞಾನದ ನೆರವು ಅಗತ್ಯವಿದೆ. ಕೋಡಿಂಗ್‌ ಮತ್ತಿತರ ಕೆಲಸ ಆಗಬೇಕಾಗುತ್ತದೆ. ಇದಕ್ಕೂ ಅವಕಾಶ ಕಲ್ಪಿಸುವ ವ್ಯವಸ್ಥೆ ಆಗಲಿದೆ. ರಾಷ್ಟ್ರೀಯ ಶಿಕ್ಷಣ ನೀತಿಯಲ್ಲಿ ಪ್ರತಿ ವಿದ್ಯಾರ್ಥಿ ಎರಡು ವರ್ಷ ತನ್ನ ಮಾತೃಭಾಷೆಯಲ್ಲಿ ಕಡ್ಡಾಯವಾಗಿ ಕಲಿಯಬೇಕು. ಈ ಮೂಲಕ ಮಾತೃಭಾಷಾ ಕಲಿಕೆಗೆ ಹೆಚ್ಚಿನ ಮಹತ್ವ ಕೊಡಲಾಗುತ್ತದೆ ಎಂದರು.

 

Advertisement

Udayavani is now on Telegram. Click here to join our channel and stay updated with the latest news.

Next