Advertisement

Reservation: ಪರಿಶಿಷ್ಟರಿಗೆ ಮೀಸಲು ನ್ಯಾಯ: ಕೇಂದ್ರದಿಂದಲೇ ಸಮಿತಿ ರಚನೆ

01:13 AM Jan 20, 2024 | Team Udayavani |

ಹೊಸದಿಲ್ಲಿ: ಮಾದಿಗ ಸಹಿತ ದೇಶದಲ್ಲಿ ಇರುವ ಪರಿಶಿಷ್ಟ ಜಾತಿ (ಎಸ್‌ಸಿ) ಗಳು ಎದು ರಿಸುತ್ತಿರುವ ಸಮಸ್ಯೆಗಳನ್ನು ಪರಿಹಾರ ಮಾಡುವ ನಿಟ್ಟಿನಲ್ಲಿ ಕೇಂದ್ರ ಸರಕಾರ ಸಮಿತಿ ರಚಿಸಿದೆ. ಹೀಗಾಗಿ ಕರ್ನಾಟಕ, ಆಂಧ್ರಪ್ರದೇಶ, ತೆಲಂಗಾಣಗಳಲ್ಲಿ ಜನಸಂಖ್ಯೆಗೆ ಅನುಗುಣವಾಗಿ ಒಳಮೀಸಲಾತಿ ನೀಡುವಂತೆ ಒತ್ತಾಯವೂ ಹೆಚ್ಚುತ್ತಿರುವುದರಿಂದ ಕೇಂದ್ರ ಸರಕಾರವೇ ಈ ಬಗ್ಗೆ ಮಧ್ಯ ಪ್ರವೇಶಿಸಿದಂತಾಗಿದೆ.

Advertisement

ಸರಕಾರದ ವಿವಿಧ ಅಭಿವೃದ್ಧಿ ಯೋಜನೆಗಳು, ಮೀಸಲು ವ್ಯವಸ್ಥೆಯ ಲಾಭಗಳು ಪರಿಶಿಷ್ಟ ಜಾತಿಗಳ ವ್ಯಾಪ್ತಿಯಲ್ಲಿ ಬರುವ ಎಲ್ಲ ವರ್ಗದವರಿಗೂ ಲಭ್ಯವಾಗುತ್ತಿವೆಯೇ ಎಂಬುದನ್ನು ಈ ಸಮಿತಿ ಪರಿಶೀಲಿಸಲಿದೆ.

ಕೇಂದ್ರ ಸಂಪುಟ ಕಾರ್ಯದರ್ಶಿ ನೇತೃತ್ವದಲ್ಲಿ ಸಮಿತಿ ರಚಿಸಲಾಗಿದೆ. ಅದರಲ್ಲಿ ಗೃಹ, ಸಿಬಂದಿ ಮತ್ತು ತರಬೇತಿ, ಬುಡಕಟ್ಟು ವ್ಯವಹಾರಗಳು, ಸಾಮಾಜಿಕ ನ್ಯಾಯಖಾತೆ ಮತ್ತು ಕಾನೂನು ಸಚಿವಾಲಯಗಳ ಕಾರ್ಯದರ್ಶಿಗಳು ಇರಲಿದ್ದಾರೆ. ಪ್ರಧಾನಮಂತ್ರಿ ಮೋದಿ ಸೂಚನೆ ಹಿನ್ನೆಲೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಗುರುವಾರವಷ್ಟೇ ಕರ್ನಾಟಕದಲ್ಲಿ ದಲಿತರಿಗೆ ಒಳ ಮೀಸಲಾತಿ ನೀಡಬೇಕು ಎಂಬ ಬಗ್ಗೆ ಕೇಂದ್ರ ಸರಕಾರಕ್ಕೆ ಮನವಿ ಸಲ್ಲಿಸಲು ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ ತೆಗೆದುಕೊಳ್ಳಲಾಗಿತ್ತು. ಇದಾದ ಬೆನ್ನಲ್ಲೇ ಕೇಂದ್ರದಿಂದ ಹೊಸ ಸಮಿತಿ ರಚನೆಯಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next