Advertisement

ಮೀಸಲು: ಜೂನ್‌ ಅಂತ್ಯಕ್ಕೆ ರಾಜ್ಯ ಸರ್ಕಾರಕ್ಕೆ ವರದಿ

11:18 PM Feb 10, 2020 | Lakshmi GovindaRaj |

ಮೈಸೂರು: ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಜನಸಂಖ್ಯೆಗೆ ಅನುಗುಣವಾಗಿ ಮೀಸಲಾತಿ ಹೆಚ್ಚಿಸುವ ಸಂಬಂಧ ರಾಜ್ಯದ ಎಲ್ಲಾ ವಿಭಾಗಗಳಲ್ಲೂ ಅಹವಾಲು ಸ್ವೀಕರಿಸುತ್ತಿದ್ದು, ಜೂನ್‌ ಅಂತ್ಯದ ವೇಳೆಗೆ ರಾಜ್ಯ ಸರ್ಕಾರಕ್ಕೆ ವರದಿ ಸಲ್ಲಿಸಲಾಗುವುದು ಎಂದು ನ್ಯಾ.ಎಚ್‌.ಎನ್‌. ನಾಗಮೋಹನ್‌ದಾಸ್‌ ಹೇಳಿದರು.

Advertisement

ನ್ಯಾ.ಎಚ್‌.ಎನ್‌.ನಾಗಮೋಹನ್‌ದಾಸ್‌ ಆಯೋಗದ ವತಿಯಿಂದ ಮೈಸೂರಿನ ಕಲಾಮಂದಿರದಲ್ಲಿ ಏರ್ಪಡಿಸಿದ್ದ ಮೈಸೂರು ವಿಭಾಗಮಟ್ಟದ ಅಹವಾಲು ಸ್ವೀಕಾರ ಮತ್ತು ಸಮಾಲೋಚನಾ ಸಭೆಯಲ್ಲಿ ಅವರು ಮಾತನಾಡಿದರು. ರಾಜ್ಯ ಸರಕಾರ ನನ್ನ ನೇತೃತ್ವದಲ್ಲಿ ಆಯೋಗ ರಚನೆ ಮಾಡಿದ ನಂತರ ಈಗಾಗಲೇ ಎರಡು ಕಂದಾಯ ವಿಭಾಗಗಳಲ್ಲಿ ಅಹವಾಲು ಸ್ವೀಕಾರ ಸಭೆ ಮುಗಿಸಿದ್ದು, ಈಗ ಮೈಸೂರು ವಿಭಾಗದ ಸಭೆ ನಡೆಸಲಾಗುತ್ತಿದೆ.

ಬೆಂಗಳೂರು ವಿಭಾಗದ ಸಭೆ ಬಳಿಕ ರಾಜ್ಯದ ವಿವಿಧ ಕಡೆಗಳಲ್ಲಿ ಬಂದಿರುವ ದೂರು,ಅಹವಾಲುಗಳನ್ನು ಅಧ್ಯಯನ ನಡೆಸಿ ಸಮಗ್ರ ಶಿಫಾರಸುಗಳೊಂದಿಗೆ ರಾಜ್ಯಸರ್ಕಾರಕ್ಕೆ ವರದಿ ಸಲ್ಲಿಕೆ ಮಾಡಲಾಗುವುದು ಎಂದು ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next