Advertisement

ಖಾಲಿ ಕೊಡಗಳೊಂದಿಗೆ ಜನತಾ ಕಾಲೋನಿ ನಿವಾಸಿಗಳ ಪ್ರತಿಭಟನೆ

03:00 PM May 14, 2019 | Team Udayavani |

ದಾವಣಗೆರೆ: ನೀರಿನ ಸಮಸ್ಯೆ ಪರಿಹರಿಸುವತ್ತ ನಿರ್ಲಕ್ಷ್ಯ ಧೋರಣೆ ತೋರುತ್ತಿರುವ ಅಣಜಿ ಗ್ರಾಮ ಪಂಚಾಯಿತಿ ಆಡಳಿತ ವಿರುದ್ಧ ಅಲ್ಲಿನ ಜನತಾ ಕಾಲೋನಿ ನಿವಾಸಿಗಳು ಸೋಮವಾರ ಖಾಲಿ ಕೊಡಗಳೊಂದಿಗೆ ಪ್ರತಿಭಟಿಸಿ, ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದಾರೆ.

Advertisement

ಗ್ರಾಮದ ಬೇರೆ ಭಾಗದಲ್ಲಿ ಸಮರ್ಪಕವಾಗಿ ನೀರು ಪೂರೈಸಲಾಗುತ್ತಿದೆಯಲ್ಲದೆ, ಸುಸಜ್ಜಿತ ಸಿಸಿ ರಸ್ತೆ ನಿರ್ಮಿಸಲಾಗಿದೆ. ಆದರೆ, ಜನತಾ ಕಾಲೋನಿ ನಿವಾಸಿಗಳ ಬಗ್ಗೆ ಮಲತಾಯಿ ಧೋರಣೆ ತೋರಲಾಗುತ್ತಿದೆ ಎಂಬುದು ಪ್ರತಿಭಟನಾಕಾರರ ಆರೋಪವಾಗಿದೆ.

ನೀರು ಹಾಗೂ ಕಾಲೋನಿಯ ರಸ್ತೆ ಸಮಸ್ಯೆ ಬಗ್ಗೆ ಗ್ರಾಮ ಪಂಚಾಯಿತಿ ಗಮನಕ್ಕೆ ಸಾಕಷ್ಟು ಬಾರಿ ತಂದಿದ್ದರೂ ಸಹ ಯಾವುದೇ ಕ್ರಮಕ್ಕೆ ಮುಂದಾಗದ ಹಿನ್ನೆಲೆಯಲ್ಲಿ ಮಹಿಳೆಯರು, ಮಕ್ಕಳು ಸೇರಿದಂತೆ ಪ್ರತಿಭಟಿಸಿದ್ದಾರೆ.

ಹೆಚ್ಚು ಪ್ರಮಾಣದ ಜನಸಂಖ್ಯೆ ಇರುವ ಕಾಲೋನಿಯ ರಸ್ತೆ ತಗ್ಗು ಗುಂಡಿ ಇರುವುದರಿಂದ ದ್ವಿಚಕ್ರ ವಾಹನ ಸವಾರರು, ಸಾರ್ವಜನಿಕರು ಸಂಚರಿಸುವುದೇ ದುಸ್ತರವಾಗಿದೆ. ಇಷ್ಟೆಲ್ಲಾ ಸಮಸ್ಯೆಗಳಿದ್ದರೂ ಗ್ರಾಮ ಪಂಚಾಯಿತಿಯವರು ಮಾತ್ರ ತಮಗೆ ಸಂಬಂಧವಿಲ್ಲದಂತೆ ವರ್ತಿಸುತ್ತಿರುವುದರಿಂದ ಸಿಟ್ಟಿಗೆದ್ದ ಕಾಲೋನಿ ನಿವಾಸಿಗಳು ಗ್ರಾಮ ಪಂಚಾಯಿತಿಗೆ ಮುತ್ತಿಗೆ ಹಾಕಿ ಪ್ರತಿಭಟಸಿ, ಸಮರ್ಪಕ ನೀರು ಪೂರೈಕೆ ಹಾಗೂ ರಸ್ತೆ ದುರಸ್ತಿಗೆ ಕ್ರಮ ವಹಿಸುವಂತೆ ಒತ್ತಾಯಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next