Advertisement

ಹಕ್ಕು ಪತ್ರ ವಿತರಣೆಗೆ ಆಗ್ರಹಿಸಿ ನಿವಾಸಿಗಳ ಪ್ರತಿಭಟನೆ

10:53 AM Dec 14, 2021 | Team Udayavani |

ಕಲಬುರಗಿ: ನಗರದ ವಾರ್ಡ್‌ ನಂ.54ರಲ್ಲಿ ಬರುವ ದರಿಯಾಪೂರ ಕೊಳಚೆ ಪ್ರದೇಶದ ನಿವಾಸಿಗಳಿಗೆ ಹಕ್ಕುಪತ್ರ ವಿತರಿಸುವಂತೆ ಆಗ್ರಹಿಸಿ ಜೈಕನ್ನಡಿಗರ ಸೇನೆ ನೇತೃತ್ವದಲ್ಲಿ ಇಲ್ಲಿನ ಕರ್ನಾಟಕ ಕೊಳಗೇರಿ ಅಭಿವೃದ್ಧಿ ಮಂಡಳಿ ಕಚೇರಿಯ ಎದುರು ಪ್ರತಿಭಟನೆ ನಡೆಸಲಾಯಿತು.

Advertisement

ದರಿಯಾಪೂರ ಕೊಳಚೆ ಪ್ರದೇಶದಲ್ಲಿ ವಾಸಿರುವ 170 ಜನ ಕೊಳಗೇರಿ ಫಲಾನುಭವಿಗಳಿಗೆ ಹಕ್ಕುಪತ್ರ ವಿತರಣೆಯಲ್ಲಿ ವಿಳಂಬ ಧೋರಣೆ ಅನುಸರಿಸಲಾಗುತ್ತಿದೆ. ಕೂಡಲೇ ಈ ವಿಳಂಬ ಧೋರಣೆಯನ್ನು ಸಲ್ಲಿಸಿ ಹಕ್ಕುಪತ್ರ ವಿತರಣೆಗೆ ಕ್ರಮ ಕೈಗೊಳ್ಳಬೇಕೆಂದು ಪ್ರತಿಭಟನಾನಿರತರು ಆಗ್ರಹಿಸಿದರು.

ಅಲ್ಲದೇ, ಬಡಾವಣೆಗೆ ಅಗತ್ಯ ಮೂಲ ಸೌಕರ್ಯ ಕೊರತೆ ಇದ್ದು, ಜಿಲ್ಲಾಡಳಿತ ಮತ್ತು ಸರ್ಕಾರ ಮೂಲ ಸೌಲಭ್ಯಗಳ ಒದಗಿಸುವ ಕೆಲಸ ಮಾಡಬೇಕು. ಈ ನಿಟ್ಟಿನಲ್ಲಿ ಈಗಾಗಲೇ ಮುಖ್ಯಮಂತ್ರಿಗಳಿಗೆ ಮನವಿ ಪತ್ರ ಸಲ್ಲಿಸಿ ಗಮನ ಸೆಳೆಯಲಾಗಿದೆ. ಆದರೂ, ಅಧಿಕಾರಿಗಳು ನಿರ್ಲಕ್ಷ್ಯ ವಹಿಸುವುದು ಖಂಡನೀಯವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಪ್ರತಿಭಟನೆಯಲ್ಲಿ ಸಂಘಟನೆಯ ಅಧ್ಯಕ್ಷ ದತ್ತು ಭಾಸಗಿ, ಮುಖಂಡರಾದ ದೇವಿಂದ್ರ ಡಿ. ಮತ್ತು ನಾಗಪ್ಪ ಹಾಗೂ ದರಿಯಾಪೂರ ಕೊಳಗೇರಿ ನಿವಾಸಿಗಳು ಪಾಲ್ಗೊಂಡಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next