Advertisement

ಮನೆ ನೀಡಲು ಆಗ್ರಹಿಸಿ ವಕಾರ ಸಾಲು ನಿವಾಸಿಗಳ ಪ್ರತಿಭಟನೆ

02:41 PM Jul 16, 2019 | Suhan S |

ಗದಗ: ಇಲ್ಲಿನ ವಕಾರ ಸಾಲಿನಲ್ಲಿ ವಾಸವಿದ್ದ ಬಡ ಹಾಗೂ ವಸತಿ ರಹಿತರಿಗೆ ಮನೆ ಒದಗಿಸಿಕೊಡಬೇಕು ಎಂದು ಆಗ್ರಹಿಸಿ ಸ್ಥಳೀಯ ನಿವಾಸಿಗಳು ಸೋಮವಾರ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು. ಈ ಕುರಿತು ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿ, ಕಳೆದ ಹಲವು ವರ್ಷಗಳಿಂದ ವಕಾರಸಾಲಿನ ಬಾಡಿಗೆ ಮನೆಗಳಲ್ಲಿ ವಾಸವಿದ್ದು, ಸ್ವಂತ ಜಾಗೆ ಹಾಗೂ ಸ್ವಂತ ಮನೆ ಹೊಂದಿಲ್ಲ. ಆದರೆ, ಇತ್ತೀಚೆಗೆ ನಗರಸಭೆ ಅಧಿಕಾರಿಗಳು ಏಕಾಏಕಿ ಜೆಸಿಬಿಗಳನ್ನು ನುಗ್ಗಿಸಿ, ವಕಾರ ಸಾಲು ತೆರವುಗೊಳಿಸಿದ್ದಾರೆ. ಇದರಿಂದ ಸ್ಥಳೀಯ ಬಡ ಜನರ ಬದುಕು ಬೀದಿಗೆ ಬಂದಿದೆ. ಈ ಹಿನ್ನೆಲೆಯಲ್ಲಿ ಸರಕಾರದ ಯಾವುದಾದರೊಂದು ಯೋಜನೆಯಡಿ ಮನೆ ಕಲ್ಪಿಸುವಂತೆ ಪ್ರತಿಭಟನಾಕಾರರು ಒತ್ತಾಯಿಸಿದರು. ಅದಕ್ಕೆ ಪ್ರತಿಕ್ರಿಯಿಸಿದ ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ, ಮನೆ ಇಲ್ಲದವರು ಸಂಬಂಧಿಸಿದ ಇಲಾಖೆಗಳ ಮೂಲಕ ಅರ್ಜಿ ಸಲ್ಲಿಸಿದರೆ, ಮನೆ ಒದಗಿಸುವುದಾಗಿ ಭರವಸೆ ನೀಡಿದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next