ಎಚ್. ಡಿ.ಕುಮಾರಸ್ವಾಮಿ ಹೇಳಿದರು. ಪಟ್ಟಣದ ಬಂಗಾರ ಧಾಮದಲ್ಲಿ ಸೋಮವಾರ ಕಾಂಗ್ರೆಸ್, ಜೆಡಿಎಸ್ ಮೈತ್ರಿ ಕೂಟದ ಅಭ್ಯರ್ಥಿ ಮಧು ಬಂಗಾರಪ್ಪ ಪರ ಮತಯಾಚಿಸಿ ಅವರು ಮಾತನಾಡಿದರು. ಸಮ್ಮಿಶ್ರ ಸರ್ಕಾರದಲ್ಲಿ ಅ ಧಿಕಾರಿಗಳ ವರ್ಗಾವಣೆ ದಂಧೆ ನಡೆಯುತ್ತಿದೆ. ಇದರಲ್ಲಿ ಅಪ್ಪ- ಮಕ್ಕಳು ಹಣ ಸಂಪಾದನೆ ಮಾಡುತ್ತಿದ್ದಾರೆಂದು ಹಗುರವಾಗಿ ಮಾತನಾಡುತ್ತಿದ್ದಾರೆ.
Advertisement
ವರ್ಗಾವಣೆಗಾಗಿ ಯಾವುದೇ ಅಧಿಕಾರಿಯಿಂದ ಹಣ ಪಡೆದ ಬಗ್ಗೆ ಸಾಕ್ಷಿ ತೋರಿಸಿ ಸಾಬೀತುಪಡಿಸಿದರೆ ನಾನು ಮುಖ್ಯಮಂತ್ರಿ ಹುದ್ದೆಗೆ ರಾಜೀನಾಮೆ ನೀಡುತ್ತೇನೆ. ಈ ಬಗ್ಗೆ ಯಡಿಯೂರಪ್ಪ ಬಹಿರಂಗ ಚರ್ಚೆಗೆ ಬರುವುದಾದರೆ ತಾವು ಸಿದಟಛಿ ಎಂದು ಸವಾಲು ಹಾಕಿದರು. ಉಪಚುನಾವಣೆ ನಂತರ ನ. 6ರಂದು ನಾನು ಮನೆಗೆ ಹೋಗುತ್ತೇನೆ ಎಂದು ಯಡಿಯೂರಪ್ಪ ಹೇಳುತ್ತಿದ್ದಾರೆ.ಮೈತ್ರಿ ಸರ್ಕಾರಕ್ಕೆ ಕಾಂಗ್ರೆಸ್ ನಾಯಕರು ಸಂಪೂರ್ಣ ಬೆಂಬಲ ನೀಡಿರುವಾಗ ಯಾರ ಭಯವೂ ಇಲ್ಲ ಎಂದು ಕುಮಾರಸ್ವಾಮಿ ಹೇಳಿದರು.