Advertisement

ಸಂಧಾನ ಮೂಲಕ ವಿವಾದ ಬಗೆಹರಿಸಿಕೊಳ್ಳಿ: ರೋಹಿಣಿ, ರೂಪಾಗೆ ಸು.ಕೋರ್ಟ್‌ ಸಲಹೆ

12:08 AM May 09, 2024 | Team Udayavani |

ಹೊಸದಿಲ್ಲಿ: ಪರಸ್ಪರ ಆರೋಪ-ಪ್ರತ್ಯಾರೋಪ ಬಿಟ್ಟು ಸಂಧಾನದ ಮೂಲಕ ವಿವಾದವನ್ನು ಬಗೆಹರಿಸಿಕೊಳ್ಳುವಂತೆ ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ಮತ್ತು ಐಪಿಎಸ್‌ ಅಧಿಕಾರಿ ಡಿ.ರೂಪಾ ಮೌದ್ಗಿಲ್‌ ಅವರಿಗೆ ಸುಪ್ರೀಂಕೋರ್ಟ್‌ಸೂಚಿಸಿದೆ.

Advertisement

ನಿಮ್ಮಬ್ಬಿರ ನಡುವಿನ ಜಗಳ ಹೀಗೆಯೇ ಮುಂದುವರಿದರೆ ನಿಮ್ಮ ವೃತ್ತಿ ಮೇಲೆ ದುಷ್ಪರಿಣಾಮ ಬೀರಲಿದೆ. ಸಾರ್ವಜನಿಕ ಜೀವನದಲ್ಲಿರುವ ನೀವು ಇಂಥ ನಡವಳಿಕೆ ಮುಂದುವರಿಸಬಾರದು ಎಂದು ನ್ಯಾ| ಅಭಯ್‌ ಎಸ್‌. ಓಕಾ ಹಾಗೂ ಪಂಕಜ್‌ ಮಿತ್ತಲ್‌ ಅವರಿದ್ದ ಪೀಠವು ಅಭಿಪ್ರಾಯಪಟ್ಟು, ವಿಚಾರಣೆಯನ್ನು ಮುಂದಿನ ವಾರಕ್ಕೆ ನಿಗದಿಪಡಿಸಿತು.

ಒಂದು ವೇಳೆ ಇಬ್ಬರೂ ತಮ್ಮ ಆರೋಪ ಪ್ರತ್ಯಾರೋಪಗಳನ್ನು ಕೈಬಿಡಲು ಮುಂದಾದರೆ, ಇಲಾಖಾ ಕ್ರಮ ಕೈಗೊಳ್ಳದಂತೆ ರಾಜ್ಯಕ್ಕೆ ಸೂಚಿಸುವುದಾಗಿ ಸುಪ್ರೀಂಕೋರ್ಟ್‌ ವಿಚಾರಣೆ ವೇಳೆ ತಿಳಿಸಿತು.

 

Advertisement

Udayavani is now on Telegram. Click here to join our channel and stay updated with the latest news.

Next