Advertisement

ಕ್ಷಯರೋಗ ನಿರ್ಮೂಲನೆಗೆ ಸಂಕಲ್ಪ ಮಾಡಿ

08:38 PM Mar 25, 2021 | Team Udayavani |

ಹಾವೇರಿ : ಕ್ಷಯರೋಗದ ಬಗ್ಗೆ ಉದಾಸೀನತೆ ಬೇಡ. ಸಕಾಲದಲ್ಲಿ ಚಿಕಿತ್ಸೆ ಪಡೆದುಕೊಳ್ಳಬೇಕು. ಸಮಾಜದಲ್ಲಿರುವ ಕ್ಷಯರೋಗದ ನಿರ್ಮೂಲನೆಗೆ ಎಲ್ಲರೂ ಸಂಕಲ್ಪ ಮಾಡಬೇಕೆಂದು ಹುಕ್ಕೇರಿಮಠದ ಸದಾಶಿವ ಸ್ವಾಮೀಜಿ ಹೇಳಿದರು.

Advertisement

ನಗರದ ಶಿವಬಸವ ಕಲ್ಯಾಣ ಮಂಟಪದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಆಸ್ಪತ್ರೆ, ಜಿಲ್ಲಾ ಕ್ಷಯರೋಗ ನಿಯಂತ್ರಣ ಕೇಂದ್ರ ಹಾಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಸಹಯೋಗದಲ್ಲಿ ಬುಧವಾರ ಆಯೋಜಿಸಿದ್ದ ವಿಶ್ವ ಕ್ಷಯ ರೋಗ ದಿನ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ನಮ್ಮ ಸಾಧನೆಗೆ ಆರೋಗ್ಯ ಮುಖ್ಯ. ಎಲ್ಲರೂ ಆರೋಗ್ಯದತ್ತ ಗಮನ ಹರಿಸಬೇಕು. ಹಿಂದಿನ ಸಂಪ್ರದಾಯ, ಪದ್ಧತಿಗಳ ನಿರ್ಲಕ್ಷ Â ಹಾಗೂ ಆರೋಗ್ಯದ ನಿಷ್ಕಾಳಜಿಯಿಂದ ಆರೋಗ್ಯ ಹದಗೆಡುತ್ತಿದೆ. ಆದ್ದರಿಂದ ಶುಚಿತ್ವಕ್ಕೆ ಆದ್ಯತೆ ನೀಡಬೇಕು ಹಾಗೂ ಎಲ್ಲರೂ ಆರೋಗ್ಯದ ಕುರಿತು ಸುರಕ್ಷತೆ ಮತ್ತು ಮುಂಜಾಗ್ರತಾ ಕ್ರಮಗಳನ್ನು ಅನುಸರಿಸಬೇಕು ಎಂದರು.

ಸರ್ಕಾರ ಕ್ಷಯ ರೋಗಿಗಳಿಗೆ ಉಚಿತ ಔಷಧಿ ನೀಡುವುದರ ಜೊತೆಗೆ ಪೌಷ್ಟಿಕ ಆಹಾರಕ್ಕಾಗಿ ಪ್ರತಿ ತಿಂಗಳು 500 ರೂ. ಸಹಾಯಧನ ನೀಡುತ್ತಿದೆ. ಇದರ ಸದುಪಯೋಗ ಪಡೆದುಕೊಂಡು ಗುಣಮುಖರಾಗಬೇಕು. ಯೋಗ, ಧ್ಯಾನ ಮಾಡುವುದರ ಜೊತೆಗೆ ಶುಚಿಯಾದ ಬಿಸಿ ಆಹಾರ ಸೇವಿಸಿ ಉತ್ತಮ ಆರೋಗ್ಯದ ಜೊತೆಗೆ ಆರೋಗ್ಯವಂತ ಸಮಾಜ ನಿರ್ಮಾಣಕ್ಕೆ ಕೈಜೋಡಿಸಬೇಕೆಂದು ಕರೆ ನೀಡಿದರು.

ಜಿಪಂ ಅಧ್ಯಕ್ಷ ಏಕನಾಥ ಭಾನುವಳ್ಳಿ ಮಾತನಾಡಿ, ಹಿಂದುಳಿದ ಪ್ರದೇಶಗಳು, ಕೊಳಚೆ ಪ್ರದೇಶಗಳಲ್ಲಿ ವಾಸವಿರುವ ಜನರಿಗೆ ಆರೋಗ್ಯ ಹಾಗೂ ಕ್ಷಯರೋಗದ ಬಗ್ಗೆ ಹೆಚ್ಚು ಜಾಗೃತಿ ಮೂಡಿಸಬೇಕು. ಕೋವಿಡ್‌ ಹಿನ್ನೆಲೆಯಲ್ಲಿ ಕ್ಷಯರೋಗಿಯ ಪತ್ತೆ ಕಾರ್ಯ ಸರಿಯಾಗಿ ಆಗಿಲ್ಲ. ರೋಗ ಲಕ್ಷಣವಿರುವ ವ್ಯಕ್ತಿಗಳು ಹಿಂಜರಿಕೆ ಬಿಟ್ಟು ಆಸ್ಪತ್ರೆಗೆ ತೆರಳಿ ಚಿಕಿತ್ಸೆ ಪಡೆದು ಸರ್ಕಾರ ನೀಡುವ ಸೌಲಭ್ಯಗಳನ್ನು ಸದುಪಯೋಗಪಡಿಸಿಕೊಂಡು ರೋಗದಿಂದ ಮುಕ್ತರಾಗಬೇಕೆಂದು ಸಲಹೆ ನೀಡಿದರು.

Advertisement

ಕಾರ್ಯಕ್ರಮದಲ್ಲಿ ಸಾವಿರ ಕ್ಷಯರೋಗಿಗಳಿಗೆ ಆಹಾರ ಕಿಟ್‌ ವಿತರಿಸಿದ ಶಶಿಧರ ಯಲಿಗಾರ ಹಾಗೂ ಈ ವರ್ಷದಲ್ಲಿ ಉತ್ತಮ ಸೇವೆಗೈದ ಜಿಲ್ಲೆಯ ಎಲ್ಲಾ ತಾಲೂಕುಗಳ ವೈದ್ಯರು, ವೈದ್ಯಾಧಿ ಕಾರಿಗಳು, ಆಶಾ ಕಾರ್ಯಕರ್ತೆಯರು ಹಾಗೂ ನರ್ಸ್‌ಗಳನ್ನು ಸನ್ಮಾನಿಸಲಾಯಿತು. ಜಿಲ್ಲಾ ಕ್ಷಯರೋಗ ನಿರ್ಮೂಲನಾ ಅಧಿಕಾರಿ ಡಾ.ನೀಲೇಶ ಎಂ.ಎನ್‌. ಪ್ರಾಸ್ತಾವಿಕವಾಗಿ ಮಾತನಾಡಿದರು.

ಜಿಲ್ಲಾ ಪಂಚಾಯತಿ ಉಪಾಧ್ಯಕ್ಷೆ ರಾಜೇಶ್ವರಿ ಕಲ್ಲೇರ, ನಗರಸಭೆ ಅಧ್ಯಕ್ಷ ಸಂಜೀವಕುಮಾರ ನೀರಲಗಿ, ನಗರಾಭಿವೃದ್ಧಿ ಪ್ರಾ ಧಿಕಾರದ ಅಧ್ಯಕ್ಷ ಶಿವಕುಮಾರ ಸಂಗೂರ, ಜಿಲ್ಲಾ ವಾರ್ತಾ  ಧಿಕಾರಿ ಡಾ.ಬಿ.ಆರ್‌. ರಂಗನಾಥ್‌, ತಾಲೂಕು ಆರೋಗ್ಯಾ ಧಿಕಾರಿ ಡಾ. ಪ್ರಭಾಕರ ಕುಂದೂರ, ಜಿಲ್ಲಾ ಕ್ಷಯರೋಗ ಚಿಕಿತ್ಸಕ ಜಗದೀಶ ಪಾಟೀಲ, ಜಿಲ್ಲೆಯ ಎಲ್ಲಾ ಕಾರ್ಯಕ್ರಮ ಅನುಷ್ಠಾನ ಅ ಧಿಕಾರಿಗಳು, ತಾಲೂಕು ಆರೋಗ್ಯಾ ಧಿಕಾರಿಗಳು, ವೈದ್ಯಾಧಿ ಕಾರಿಗಳು ಇತರರು ಭಾಗವಹಿಸಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next