Advertisement

ಗೋವಾ: ಅತಂತ್ರ ಫಲಿತಾಂಶದ ಸಮೀಕ್ಷೆ ಹಿನ್ನೆಲೆ; ಜೋರಾಯಿತು ರಾಜಕೀಯ ಪಕ್ಷಗಳ ರೆಸಾರ್ಟ್ ರಾಜಕಾರಣ

04:00 PM Mar 09, 2022 | Team Udayavani |

ಪಣಜಿ: ನಾಳೆ ಗೋವಾ ವಿಧಾನಸಭಾ ಫಲಿತಾಂಶ ಹೊರ ಬೀಳಲಿದ್ದು, ಫಲಿತಾಂಶಕ್ಕೂ ಮುನ್ನವೇ ಗೋವಾದಲ್ಲಿ ರೆಸಾರ್ಟ್ ರಾಜಕಾರಣ ಆರಂಭಗೊಂಡಿದೆ. ಕಾಂಗ್ರೆಸ್ ಪಕ್ಷವು ತನ್ನ ಅಭ್ಯರ್ಥಿಗಳನ್ನು ರಕ್ಷಿಸಿಕೊಳ್ಳಲು ರೆಸಾರ್ಟ್ ಗೆ ಸ್ಥಳಾಂತರಿಸಿದ ಬೆನ್ನಲ್ಲೇ ಆಮ್ ಆದ್ಮಿ ಪಕ್ಷ ಕೂಡ ತನ್ನ ಅಭ್ಯರ್ಥಿಗಳನ್ನು ರಕ್ಷಿಸಿಕೊಳ್ಳಲು ಮುಂದಾಗಿದೆ.

Advertisement

ಗೋವಾದಲ್ಲಿ ಪ್ರಸಕ್ತ ವಿಧಾನಸಭಾ ಚುನಾವಣೆಯಲ್ಲಿ ಯಾವುದೇ ಪಕ್ಷಗಳಿಗೆ ಪೂರ್ಣ ಬಹುಮತ ಲಭಿಸುವ ಸಾಧ್ಯತೆಯಿಲ್ಲ ಎಂಬ ಸಮೀಕ್ಷೆಯ ಹಿನ್ನೆಲೆಯಲ್ಲಿ ಬಿಜೆಪಿ  ಮತ್ತು ಕಾಂಗ್ರೆಸ್ ಪಕ್ಷಗಳು ರಾಜ್ಯದಲ್ಲಿ ಸರ್ಕಾರ ಸ್ಥಾಪಿಸಲು ವಿವಿಧ ಪಕ್ಷಗಳ ಅಭ್ಯರ್ಥಿಗಳೊಂದಿಗೆ ಮತ್ತು ಪಕ್ಷೇತರ ಅಭ್ಯರ್ಥಿಗಳೊಂದಿಗೆ ಸಂಪರ್ಕ ಸಾಧಿಸುತ್ತಿದ್ದಾರೆ ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಕಳೆದ ವಿಧಾನಸಭಾ ಚುನಾವಣೆಯ ಪರಿಸ್ಥಿತಿ ಪುನರಾವರ್ತನೆಯಾಗದಂತೆ ಎಚ್ಚರಿಕೆ ವಹಿಸಲು ಮುಂದಾಗಿದೆ. ಈಗಾಗಲೇ ಗೋವಾಕ್ಕೆ ಆಗಮಿಸಿರುವ ಕಾಂಗ್ರೆಸ್ ಚುನಾವಣಾ ಪ್ರಭಾರಿ ಪಿ.ಚಿದಂಬರಂ ಮತ್ತು ಗೋವಾ ಕಾಂಗ್ರೆಸ್ ಉಸ್ತುವಾರಿ ದಿನೇಶ್ ಗುಂಡೂರಾವ್ ರವರು ತಮ್ಮ ಅಭ್ಯರ್ಥಿಗಳನ್ನು ಉತ್ತರ ಗೋವಾದ ರೆಸಾರ್ಟ್ ಗೆ ಸ್ಥಳಾಂತರಿಸಿದ್ದಾರೆ. ಗುರುವಾರ ಚುನಾವಣಾ ಫಲಿತಾಂಶ ಹೊರಬೀಳುವ ವರೆಗೂ ಕಾಂಗ್ರೆಸ್ ಅಭ್ಯರ್ಥಿಗಳು ರೆಸಾರ್ಟ್ ನಲ್ಲಿಯೇ ಉಳಿಯಲಿದ್ದಾರೆ.

ಈ ಕುರಿತು ಗೋವಾ ಕಾಂಗ್ರೆಸ್ ಉಸ್ತುವಾರಿ ಪಿ.ಚಿದಂಬರಂ ಪ್ರತಿಕ್ರಿಯೆ ನೀಡಿ- ನಮ್ಮ ಪಕ್ಷವು ಅಭ್ಯರ್ಥಿಗಳ ಕಳ್ಳರಿಂದ ಜಾಗರೂಕವಾಗಿದೆ. 2017 ರ ವಿಧಾನಸಭಾ ಚುನಾವಣೆಯಲ್ಲಿ ಕಾಗ್ರೇಸ್ ಗೋವಾದಲ್ಲಿ ಏಕೈಕ ದೊಡ್ಡ ಪಕ್ಷವಾಗಿ ಹೊರಹೊಮ್ಮಿದರೂ ಸರ್ಕಾರ ರಚಿಸಲು ವಿಫಲವಾಗುವಂತಾಗಿತ್ತು. ನಮ್ಮ ಅಭ್ಯರ್ಥಿ ಅಭ್ಯರ್ಥಿಗಳನ್ನು ಪ್ರಸಕ್ತ ಬಾರಿ ಕಳ್ಳತನ ಮಾಡಲು ಬಿಡುವುದಿಲ್ಲ ಎಂದರು.

ನಮ್ಮ ಪಕ್ಷದ ಗೋವಾ ನಾಯಕರು ಇತರ ಪಕ್ಷದ ನಾಯಕರೊಂದಿಗೆ ಸಂಪರ್ಕದಲ್ಲಿದ್ದಾರೆ. ಆಡಳಿತಾರೂಢ ಬಿಜೆಪಿ ವಿರುದ್ಧ ಹೋರಾಡಲು ಕಾಂಗ್ರೆಸ್ ಮತ್ತು ಇತರ ಪಕ್ಷಗಳ ನಡುವೆ ಮೈತ್ರಿ ಮಾಡಿಕೊಳ್ಳಲು ಟಿಎಂಸಿ ಈ ಹಿಂದೆ ಪ್ರಸ್ತಾಪಿಸಿತ್ತು. ಆದರೆ ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ಲುಯಿಜಿನ್ ಫಾಲೆರೊ ರವರಂತಹ ನಾಯಕರನ್ನು ಟಿಎಂಸಿ ತನ್ನ ಪಕ್ಷಕ್ಕೆ ಸೆಳೆದುಕೊಂಡ ಕಾರಣ ಗೋವಾದಲ್ಲಿ ಅವರ ಮೈತ್ರಿ ಪ್ರಸ್ತಾಪವನ್ನು ಪರಿಗಣಿಸಲಾಗಿಲ್ಲ ಎಂದು ಪಿ.ಚಿದಂಬರಂ ನುಡಿದರು.

Advertisement

Udayavani is now on Telegram. Click here to join our channel and stay updated with the latest news.

Next