Advertisement

ಮತದಾರರ ಸಮಸ್ಯೆಗೆ ಸ್ಪಂದನೆ

01:31 PM Nov 26, 2021 | Team Udayavani |

ಕಲಬುರಗಿ: ಕಳೆದ ಆರು ವರ್ಷಗಳಲ್ಲಿ ಪರಿಷತ್‌ನಲ್ಲಿ ಸ್ಥಳೀಯ ಸಂಸ್ಥೆಗಳ ಸಮಸ್ಯೆಗಳ ಕುರಿತಾಗಿ ಹಲವಾರು ಪ್ರಶ್ನೆಗಳನ್ನು ಕೇಳಿ ಸರ್ಕಾರದ ಗಮನಕ್ಕೆ ತರಲಾಗಿದೆ ಎಂದು ವಿಧಾನ ಪರಿಷತ್‌ ಸದಸ್ಯ, ಬಿಜೆಪಿ ಅಭ್ಯರ್ಥಿ ಬಿ.ಜಿ.ಪಾಟೀಲ ಹೇಳಿದರು.

Advertisement

ನಗರದ ಕುಸನೂರ ಗ್ರಾಮದಲ್ಲಿರುವ ಕರಕೊಳ ಗುಡ್ಡ ಅವರಣದಲ್ಲಿ ನಡೆದ ಚುನಾವಣೆ ಪ್ರಚಾರ ಮಾಡಿದ ಅವರು, ಕಾಂಗ್ರೆಸ್‌ನವರು ವಿನಾಕಾರಣ ಆರೋಪ ಮಾಡುತ್ತಿದ್ದಾರೆ. ಕಾಂಗ್ರೆಸ್‌ನವರ ಆರೋಪಗಳಿಗೆ ಮತದಾರರು ಯಾವುದೇ ಕಿವಿಗೊಡುವುದಿಲ್ಲ ಎಂದರು.

ಬಿಜೆಪಿ ರಾಜ್ಯ ವಕ್ತಾರರಾಗಿರುವ ರಾಜಕುಮಾರ ಪಾಟೀಲ ತೇಲ್ಕೂರ ಮಾತನಾಡಿ, ಬಿ.ಜಿ.ಪಾಟೀಲ ಅವರು ಗೆಲ್ಲುವುದರಲ್ಲಿ ಯಾವುದೇ ಸಂಶಯವಿಲ್ಲ ಎಂದರು. ಕೆಕೆಆರ್‌ಡಿಬಿ ಅಧ್ಯಕ್ಷ ದತ್ತಾತ್ರೇಯ ಪಾಟೀಲ, ಶಾಸಕರಾದ ಸುಭಾಷ ಆರ್‌. ಗುತ್ತೇದಾರ, ಬಸವರಾಜ ಮತ್ತಿಮಡು, ಶಶೀಲ್‌ ಜಿ. ನಮೋಶಿ, ಬಿಜೆಪಿ ಗ್ರಾಮಾಂತರ ಜಿಲ್ಲಾಧ್ಯಕ್ಷ ಶಿವರಾಜ ಪಾಟೀಲ ರದ್ದೇವಾಡಗಿ, ಜಿಪಂ ಮಾಜಿ ಅಧ್ಯಕ್ಷ ಅಂಬಾರಾಯ ಅಷ್ಠಗಿ, ಸುಭಾಷ ಬಿರಾದಾರ ಮುಂತಾದವರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next