Advertisement

Twenty20 ಮ್ಯಾಚ್ ಆಡುವ ಜವಾಬ್ದಾರಿ ಪಕ್ಷ ನೀಡಿದೆ: ಬಿ.ವೈ.ವಿಜಯೇಂದ್ರ

04:55 PM Nov 19, 2023 | Team Udayavani |

ಮೈಸೂರು: ನನಗೆ ಸದ್ಯ ರಾಜಕೀಯದ ಟಿ20 ಮ್ಯಾಚ್ ಆಡುವ ಜವಾಬ್ದಾರಿಯನ್ನ ಪಕ್ಷ ವಹಿಸಿದೆ.ಅ ದೃಷ್ಟಿಯಲ್ಲಿ ಎಲ್ಲ ಕಡೆ ಹೋಗಿ ಪಕ್ಷವನ್ನ ಸಂಘಟಿಸುತ್ತಿದ್ದೇನೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಅವರು ಭಾನುವಾರ ವಿಶ್ವಕಪ್ ಫೈನಲ್ ಸಂದರ್ಭದಲ್ಲಿ ಹೇಳಿಕೆ ನೀಡಿದ್ದಾರೆ.

Advertisement

ರಾಜ್ಯಾಧ್ಯಕ್ಷರಾದ ನಂತರ ಮೊದಲ ಬಾರಿಗೆ ಮೈಸೂರಿಗೆ ಆಗಮಿಸಿದ ವಿಜಯೇಂದ್ರ ಅವರಿಗೆ ಅಭಿಮಾನಿಗಳು ಕ್ರೇನ್ ಮೂಲಕ ಬೃಹತ್ ಸೇಬಿನ ಹಾರ ಹಾಕಿ ಅದ್ದೂರಿ ಸ್ವಾಗತ ನೀಡಿದರು.

ಸುದ್ದಿಗಾರರೊಂದಿಗೆ ಮಾತನಾಡಿ,”ಪಕ್ಷದ ಕಾರ್ಯದ ನಡುವೆ ವಿಶ್ವಕಪ್ ಕ್ರಿಕೆಟ್ ಫೈನಲ್ ನೋಡಲು ಸಮಯ ಆಗುತ್ತಿಲ್ಲ. ಭಾರತ ತಂಡ ಇಂದು ವಿಶ್ವಕಪ್ ಗೆದ್ದೆ ಗೆಲ್ಲುತ್ತೆ.ವಿರಾಟ್ ಕೊಹ್ಲಿ ನನ್ನ ನೆಚ್ಚಿನ ಆಟಗಾರ. ಭಾರತ ತಂಡ ಆಲ್ ರೌಂಡ್ ಪ್ರದರ್ಶನ ತೋರುತ್ತಿದೆ.ನಮ್ಮ ಟೀಂ ಬಹಳ ಚೆನ್ನಾಗಿದೆ.ಆಲ್ ದಿ ಬೆಸ್ಟ್ ಟೀಂ ಇಂಡಿಯಾ” ಎಂದರು.

ಇಂದು ನಾನು ರಾಜಕೀಯ ಮಾತನಾಡಲ್ಲ ನಾಳೆ ಪತ್ರಿಕಾಗೋಷ್ಠಿಯಲ್ಲಿ ಮಾತನಾಡುತ್ತೇನೆ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next