Advertisement

ಸಾಮೂಹಿಕ ನಮಾಜ್‌ಗೆ ನಿರ್ಬಂಧ

05:38 PM Mar 28, 2020 | Team Udayavani |

ಗಂಗಾವತಿ: ಕೋವಿಡ್ 19 ವೈರಸ್‌ ಹರಡದಂತೆ ಸರಕಾರ ಮುನ್ನೆಚ್ಚರಿಕೆ ಕ್ರಮ ತೆಗೆದುಕೊಂಡಿದ್ದು, ಮಸೀದಿಗಳಲ್ಲಿ ಸಾಮೂಹಿಕ ಪ್ರಾರ್ಥಣೆ ಮಾಡದಂತೆ ಡಿವೈಎಸ್‌ಪಿ ಡಾ| ಚಂದ್ರಶೇಖರ ಸೂಚನೆ ನೀಡಿದರು.

Advertisement

ತಮ್ಮ ಕಚೇರಿಯಲ್ಲಿ ನಡೆದ ಮಸೀದಿಗಳ ಮುಖಂಡರ ಸಭೆಯಲ್ಲಿ ಮಾತನಾಡಿದ ಅವರು, ಕೋವಿಡ್ 19 ವೈರಸ್‌ ಹರಡದಂತೆ ಮುನ್ನೆಚ್ಚರಿಕೆ ವಹಿಸಲು ಎಲ್ಲರೂ ಸರಕಾರದ ಜತೆ ಕೈಜೋಡಿಸಬೇಕಿದೆ. ಆದ್ದರಿಂದ ಮಸೀದಿಗಳಲ್ಲಿ ಪ್ರಾರ್ಥನೆ ಸಲ್ಲಿಸದೇ, ಮನೆಯಲ್ಲಿ ಸಾಮಾಜಿಕ ಅಂತರ ಕಾಯ್ದುಕೊಂಡು ಮಾಡಬೇಕು. ರಾಜ್ಯ ವಕ್ಫ್  ಮತ್ತು ಹಜ್‌ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಹೊರಡಿಸಿದ ಸೂಚನೆಯನ್ನು ತಪ್ಪದೇ ಪಾಲಿಸಿ ಕೋವಿಡ್ 19 ಹರಡುವುದನ್ನು

ತಪ್ಪಿಸಬೇಕು ಎಂದರು. ತಹಶೀಲ್ದಾರ್‌ ಎಲ್‌.ಡಿ. ಚಂದ್ರಕಾಂತ, ಅಲ್ಪಸಂಖ್ಯಾತರ ಇಲಾಖೆ ಜಿಲ್ಲಾಧಿಕಾರಿ ಮಕ್ಬೂಲ್‌ ಹಾಗೂ ಪೊಲೀಸ್‌ ಅಧಿಕಾರಿಗಳು ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next