Advertisement

ಸರ್ಕಾರಿ ನೌಕರರ ವಿದೇಶ ಪ್ರವಾಸಕ್ಕೆ ನಿರ್ಬಂಧ

11:27 PM Mar 17, 2020 | Team Udayavani |

ಬೆಂಗಳೂರು: ಮುಂಜಾಗ್ರತಾ ಕ್ರಮವಾಗಿ ರಾಜ್ಯ ಸರ್ಕಾರಿ ನೌಕರರ ಹಾಗೂ ಅಧಿಕಾರಿಗಳ ಅಧಿಕೃತ ಹಾಗೂ ಖಾಸಗಿ ವಿದೇಶ ಪ್ರವಾಸವನ್ನು ಸರ್ಕಾರ ನಿಷೇಧಿಸಿದೆ. ಮಂಗಳವಾರದಿಂದಲೇ ಜಾರಿಗೆ ಬರುವಂತೆ ಮುಂದಿನ ಆದೇಶದವರೆಗೂ ವಿದೇಶ ಪ್ರವಾಸ ನಿಷೇಧಿಸಿ ರಾಜ್ಯ ಸರ್ಕಾರ ಸುತ್ತೋಲೆ ಹೊರಡಿಸಿದೆ.

Advertisement

ಡಿಸಿಎಂಗೆ ಕಲಬುರಗಿಗೆ ಹೋಗಲು ಭಯ!: ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಗೋವಿಂದ ಕಾರಜೋಳ ಅವರು ಕೊರೊನಾ ಸೋಂಕು ಪತ್ತೆಯಾದ ಬಳಿಕ ಕಲಬುರಗಿಗೆ ಭೇಟಿ ನೀಡಿಲ್ಲ ಎಂಬ ಆರೋಪದ ಹಿನ್ನೆಲೆಯಲ್ಲಿ ವಿಧಾನಸೌಧದಿಂದಲೇ ಜಿಲ್ಲಾಧಿಕಾರಿಯೊಂದಿಗೆ ವಿಡಿಯೊ ಕಾನ್ಪರೆನ್ಸ್‌ ನಡೆಸಿದರು.

ಈ ವೇಳೆ, ಕಲಬುರಗಿಯಲ್ಲಿ ಮತ್ತಷ್ಟು ಮುಂಜಾಗ್ರತಾ ಕ್ರಮ ಕೈಗೊಳ್ಳಲು ಸೂಚಿಸಿದರು. ಬಳಿಕ, ಮಾಧ್ಯಮದವರು ಕಲಬುರಗಿಗೆ ಹೋಗಲು ಭಯವೇ ಎಂದು ಉಪಮುಖ್ಯಮಂತ್ರಿಗಳನ್ನು ಪ್ರಶ್ನಿಸಿದಾಗ, “ಹೌದು, ಯಾರಿಗೆ ಇಲ್ಲ ಭಯ.

ನಿಮಗೂ ಭಯ ಇದೆ. ನಮಗೂ ಇದೆ. ಇಲ್ಲಿಂದಲೇ ಅಗತ್ಯ ಕ್ರಮ ಕೈಗೊಂಡಿದ್ದೇವೆ. ಈ ಹಿಂದೆ ಮಹಾರಾಷ್ಟ್ರಕ್ಕೆ ಹೋಗಿ ಬಂದಾಗ ಎಚ್‌1ಎನ್‌1 ಬಂದಿತ್ತು. ಈಗ ಮತ್ತೆ ಅದೇ ಸಮಸ್ಯೆ ತಂದುಕೊಳ್ಳುವುದು ಬೇಡ’ ಎಂದು ಉತ್ತರಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next