Advertisement

ಉಡುಪಿ: ಜಿಲ್ಲೆಯಿಂದ ಹೊರ ಹೋಗಲು ಮತ್ತು ಜಿಲ್ಲಾ ಪ್ರವೇಶಕ್ಕೆ ಸಂಪೂರ್ಣ ನಿರ್ಬಂಧ

09:17 AM Apr 11, 2020 | Hari Prasad |

ಉಡುಪಿ: ಜಿಲ್ಲೆಯಲ್ಲಿ ಇದುವರೆಗೂ ಮೂರು ಕೋವಿಡ್ 19 ಸೋಂಕಿತ ಪ್ರಕರಣಗಳು ಪತ್ತೆಯಾಗಿದ್ದು ಅವರೆಲ್ಲರೂ ಐಸೊಲೇಷನ್ ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಸಂಪೂರ್ಣ ಗುಣಮುಖರಾಗುತ್ತಿದ್ದಾರೆ. ಮತ್ತು ಈ ಸೋಂಕಿತರೊಂದಿಗೆ ಸಂಪರ್ಕದಲ್ಲಿದ್ದ ಪ್ರೈಮರಿ ಹಾಗೂ ಸೆಕೆಂಡರಿ ಕಾಂಟ್ಯಾಕ್ಟ್ ಗಳನ್ನು ಗುರುತಿಸಿ ಕ್ವಾರೆಂಟೈನ್ ನಲ್ಲಿಡಲಾಗಿತ್ತು ಮತ್ತು ಅವರೆಲ್ಲರ ಗಂಟಲ ದ್ರವದ ಮಾದರಿ ತಪಾಸಣಾ ವರದಿ ನೆಗೆಟಿವ್ ಬಂದಿರುತ್ತದೆ.

Advertisement

ಸದ್ಯದ ಮಟ್ಟಿಗೆ ಉಡುಪಿ ಜಿಲ್ಲೆಯಲ್ಲಿ ಕೋವಿಡ್ ಸೋಂಕು ಕಾಣಿಸಿಕೊಳ್ಳುವ ಸಾಧ್ಯತೆಗಳು ಕಡಿಮೆ ಇದೆ. ಈ ಕಾರಣದಿಂದ ಮುಂಬರುವ ದಿನಗಳಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಉಡುಪಿ ಜಿಲ್ಲೆಯಿಂದ ಯಾರನ್ನೂ ಹೊರಗಡೆ ಬಿಡಲಾಗುವುದಿಲ್ಲ ಮತ್ತು ಈ ಜಿಲ್ಲೆಗೆ ಹೊರ ರಾಜ್ಯದ ಹಾಗೂ ಹೊರ ಜಿಲ್ಲೆಗಳ ವ್ಯಕ್ತಿಗಳು ಬರುವುದಕ್ಕೆ ಸದ್ಯಕ್ಕೆ ಅವಕಾಶ ಇರುವುದಿಲ್ಲ. ಈ ನಿಯಮವನ್ನು ಎಲ್ಲರೂ ಕಟ್ಟುನಿಟ್ಟಾಗಿ ಪಾಲಿಸುವಂತೆ ಹಾಗೂ ಈ ನಿಟ್ಟಿನಲ್ಲಿ ಸಾರ್ವಜನಿಕರು ತಮ್ಮ ಸಹಕಾರವನ್ನು ನೀಡುವಂತೆ ಉಡುಪಿ ಜಿಲ್ಲಾಧಿಕಾರಿ ಜಗದೀಶ್ ಜಿ. ಅವರು ವಿನಂತಿಸಿಕೊಂಡಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next