Advertisement

ಪಂಚರಾಜ್ಯ ಫಲಿತಾಂಶ ಕಾಂಗ್ರೆಸ್ ಪಕ್ಷಕ್ಕೆ ದೊಡ್ಡ ಆಘಾತ : ದಿನೇಶ್ ಗುಂಡೂರಾವ್

02:15 PM Mar 11, 2022 | Team Udayavani |

ಬೆಂಗಳೂರು : ಪಂಚರಾಜ್ಯ ಚುನಾವಣಾ ಫಲಿತಾಂಶ ಕಾಂಗ್ರೆಸ್ ಪಕ್ಷದ ಮಟ್ಟಿಗೆ ಹಿನ್ನಡೆಯಾದರೂ ಅಂತಿಮವಾಗಿ ಜನಾದೇಶಕ್ಕೆ ಗೌರವ ಕೊಡಲೇಬೇಕು, ಚುನಾವಣೆ ನಡೆದ ಐದೂ ರಾಜ್ಯಗಳಲ್ಲಿ ಚುನಾವಣೆ ನಡೆದ ರಾಜ್ಯಗಳಲ್ಲಿ ಜನರ ನಾಡಿ ಮಿಡಿತ ನಾವು ಅರಿಯುವಲ್ಲಿ ನಮ್ಮ ಪಕ್ಷ ವಿಫಲವಾಗಿದೆ ಎಂದು ಕಾಂಗ್ರೆಸ್ ನಾಯಕ, ಗೋವಾ ಚುನಾವಣಾ ಉಸ್ತುವಾರಿ ದಿನೇಶ್ ಗುಂಡೂರಾವ್ ಅಭಿಪ್ರಾಯ ಹೊರ ಹಾಕಿದ್ದಾರೆ.

Advertisement

ಟ್ವೀಟ್ ಗಳನ್ನು ಮಾಡಿರುವ ಅವರು, ನನ್ನ ಉಸ್ತುವಾರಿಯಲ್ಲಿದ್ದ ಗೋವಾದಲ್ಲಿ ನಮ್ಮ ಪಕ್ಷ ಅಧಿಕಾರ ಹಿಡಿಯದ ನಿರಾಸೆಯಿದ್ದರೂ ಪಕ್ಷದ ಸಾಧನೆ ಸ್ವಲ್ಪ ಮಟ್ಟಿಗೆ ಸಮಾಧಾನ ತಂದಿದೆ. ಬಿಜೆಪಿಯ ಷಡ್ಯಂತ್ರ ಹಾಗೂ ಕುದುರೆ ವ್ಯಾಪಾರದಿಂದ ಶೂನ್ಯದಲ್ಲಿದ್ದ ಕಾಂಗ್ರೆಸ್ 11 ಸ್ಥಾನ ಗಳಿಸಿ ಎರಡನೇ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ. ಪಂಜಾಬ್ ಫಲಿತಾಂಶ ಪಕ್ಷದ ಮಟ್ಟಿಗೆ ದೊಡ್ಡ ಆಘಾತ ಎಂದು ಬರೆದಿದ್ದಾರೆ.

ಉತ್ತರಾಖಂಡ ಹಾಗೂ ಮಣಿಪುರದಲ್ಲೂ ನಾವು ನಿರೀಕ್ಷಿಸಿದ ಫಲಿತಾಂಶ ಬಂದಿಲ್ಲ. ಬಿಜೆಪಿ ಸರ್ಕಾರದ ಆಡಳಿತ ವೈಫಲ್ಯವನ್ನು ನಾವು ಪರಿಣಾಮಕಾರಿಯಾಗಿ ಜನರಿಗೆ ತಲುಪಿಸುವಲ್ಲಿ ಎಡವಿದ್ದೇವೆ. ಇದರ ಲಾಭ ಪಡೆದುಕೊಂಡಿರುವ ಬಿಜೆಪಿ ಈ ರಾಜ್ಯಗಳಲ್ಲಿ ಜನಾದೇಶ ಪಡೆದುಕೊಂಡಿದೆ ಎಂದು ಹೇಳಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next