Advertisement

Retired ACP ಸುಭಾಷ್ ಚಂದ್ರ ವಿಧಿವಶ ; ಗಣ್ಯರ ಸಂತಾಪ

02:54 PM May 31, 2023 | Team Udayavani |

ಮಂಗಳೂರು: ಬೆಳ್ತಂಗಡಿಯ ಸುರ್ಯ ಶ್ರೀ ಸದಾಶಿವ ರುದ್ರ ದೇವಸ್ಥಾನದ ಅನುವಂಶಿಕ ಆಡಳಿತ ಮೊಕ್ತೇಸರ ಹಾಗೂ ನಿವೃತ್ತ ಅಸಿಸ್ಟೆಂಟ್ ಕಮಿಷನರ್ ಆಫ್ ಪೊಲೀಸ್ (ACP) ಶ ಸುಭಾಷ್ ಚಂದ್ರ ಸುರ್ಯಗುತ್ತು(70) ಮೇ 31(ಬುಧವಾರ) ಮುಂಜಾನೆ 2:45 ಕ್ಕೆ ನಿಧನ ಹೊಂದಿದ್ದಾರೆ.

Advertisement

ಮಂಗಳೂರು ಅಶೋಕನಗರದ ಪಾಲ್ಗುಣಿ ನಗರದನಿವಾಸದಲ್ಲಿ ಅಂತಿಮ ದರ್ಶನದ ನಂತರ ಅವರ ಹುಟ್ಟೂರಾದ ಸುರ್ಯಗುತ್ತಿನಲ್ಲಿ ಅಂತಿಮ ವಿಧಿ ವಿಧಾನವನ್ನು ಮಧ್ಯಾಹ್ನ ನೆರವೇರಿಸಲಾಗಿದೆ.

ಅಲ್ಪಕಾಲದ ಅನಾರೋಗ್ಯದಿಂದ ಬಳಲುತ್ತಿದ್ದರು. ಪತ್ನಿ, ಓರ್ವ ಪುತ್ರ, ಸಹೋದರ ಎಸ್. ಡಿ.ಎಂ. ಸಮೂಹ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ಡಾ.ಎಸ್. ಸತೀಶ್ಚಂದ್ರ ಸಹಿತ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.

ಸುಭಾಶ್ಚಂದ್ರ ಅವರು 1979 ರಲ್ಲಿ ಪೊಲೀಸ್ ಇಲಾಖೆಗೆ ಎಸೈ ಆಗಿ ಸೇರ್ಪಡೆಗೊಂಡರು. ಅವರು ಬಳಿಕ ಬೆಂಗಳೂರು, ಮಡಿಕೇರಿ, ಕಾರವಾರ, ಉಡುಪಿ, ಮಂಗಳೂರು, ಬೆಳ್ತಂಗಡಿ, ಪುತ್ತೂರು ಮತ್ತಿತರ ಕಡೆಗಳಲ್ಲಿ ಸೇವೆ ಸಲ್ಲಿಸಿದ್ದರು. ಪೊಲೀಸ್ ಇಲಾಖೆಯಲ್ಲಿ ಅವರು ಸಲ್ಲಿಸಿದ ವಿಶೇಷ ಸೇವೆಗಾಗಿ ಅವರಿಗೆ 2008 ರಲ್ಲಿ ಮುಖ್ಯ ಮಂತ್ರಿಯವರ ಪದಕ ಲಭಿಸಿತ್ತು. ಅವರು ಒಂದು ವರ್ಷದ ಕಾಲ ಕೊಸೊವೊದಲ್ಲಿ ವಿಶ್ವ ಸಂಸ್ಥೆಯ ಶಾಂತಿ ಪಾಲನಾ ಪಡೆಯಲ್ಲಿ ಕರ್ತವ್ಯ ನಿರ್ವಹಿಸಿದ್ದರು.

ಸುಭಾಷ್ ಚಂದ್ರ ಅವರ ನಿಧಾನಕ್ಕೆ ಗಣ್ಯರು ತೀವ್ರ ಸಂತಾಪ ಸೂಚಿಸಿದ್ದಾರೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next