Advertisement

ಸೇನೆಯಿಂದ ನಿವೃತ್ತಿ ಹೊಂದಿ ಹುಟ್ಟೂರಿಗೆ ಆಗಮಿಸಿದ  ಭಾಸ್ಕರ ಕಾರಿಂಜರಿಗೆ ಸನ್ಮಾನ

05:13 PM Dec 05, 2021 | Team Udayavani |

ಅರಂತೋಡು: ಕನಕಮಜಲು ಗ್ರಾಮದ ಭಾಸ್ಕರ ಕಾರಿಂಜರವರು ಅರೆಸೇನಾ ಪಡೆಯ ಸೆಂಟ್ರಲ್ ರಿಸರ್ವ್‌ಡ್ ಪೋಲಿಸ್ ಫೋರ್ಸ್‌ನಲ್ಲಿ ಸೇವೆ ಸಲ್ಲಿಸಿ ಡಿ. 1 ರಂದು ನಿವೃತ್ತರಾಗಿದ್ದು, ಡಿ. 5 ರಂದು ತನ್ನ ಹುಟ್ಟೂರು ಕನಕಮಜಲಿನ ಕಾರಿಂಜಕ್ಕೆ ಆಗಮಿಸಿದರು. ತರವಾಡು ದೈವಸ್ಥಾನದ ಆಶೀರ್ವಾದ ಪಡೆದ ನಂತರ ತನ್ನ ಮನೆಯಲ್ಲಿ ನಡೆದ ಸತ್ಯನಾರಾಯಣ ಪೂಜೆಯಲ್ಲಿ ಭಾಗಿಯಾದ ನಂತರ ಕಾರಿಂಜ ಕುಟುಂಬಸ್ಥರ ಪರವಾಗಿ ಸನ್ಮಾನ ಕಾರ್ಯಕ್ರಮ ನಡೆಯಿತು.

Advertisement

ನಿವೃತ್ತ ಹಿರಿಯ ಶಿಕ್ಷಕ ಕೇಪು ಸುಂದರ್ ಮಾಸ್ತರ್ ಅವರು ನಿವೃತ್ತ ಸೈನಿಕ ದಂಪತಿಗಳನ್ನು ಸನ್ಮಾನಿಸಿ ಶುಭ ಹಾರೈಸಿದರು.

ರಾಷ್ಟ್ರೀಯ ಸ್ವಯಂಸೇವಕ ಸಂಘದ ನ. ಸೀತಾರಾಮ, ಕಾರಿಂಜ ದೈವಸ್ಥಾನದ ಆಡಳಿತ ಮಂಡಳಿ ಅಧ್ಯಕ್ಷ ಕುಶಾಲಪ್ಪ ಕಾರಿಂಜ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಕಾರಿಂಜ ಬಾಲಕೃಷ್ಣ ಗೌಡ ದಂಪತಿಗಳು, ಲೋಲಾಕ್ಷ ಕಾರಿಂಜ, ಉಮೇಶ್ ಕಾರಿಂಜ, ಭಾಸ್ಕರ ಕಾರಿಂಜರ ಧರ್ಮಪತ್ನಿ ಶ್ರೀಮತಿ ಆರತಿ ಮತ್ತು ಮಕ್ಕಳು ಸೇರಿದಂತೆ ಕುಟುಂಬಸ್ಥರು ಬಂಧು ಮಿತ್ರರು ಉಪಸ್ಥಿತರಿದ್ದರು.

ನಿವೃತ್ತ ಶಿಕ್ಷಕ ಸೀತಾರಾಮ ಬುಡ್ಲೆಗುತ್ತು ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು. ಶಿಕ್ಷಕ ಜಯಪ್ರಸಾದ್ ಕಾರಿಂಜ ವಂದಿಸಿದರು.  ಇದೇ ಸಂದರ್ಭ ಹಿರಿಯ ನಿವೃತ್ತ ಶಿಕ್ಷಕ ಕೇಪು ಸುಂದರ್ ಮಾಸ್ತರ್ ಅವರನ್ನು ಸನ್ಮಾನಿಸಲಾಯಿತು. ರಾಷ್ಟ್ರೀಯ ಸ್ವಯಂಸೇವಕ ಸಂಘಕ್ಕೆ ಮಂಗಳ ನಿಧಿಯನ್ನು ಸಮರ್ಪಿಸಲಾಯಿತು.

Advertisement

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next