Advertisement

ಪಶ್ಚಿಮಬಂಗಾಳ;ರಕ್ತದ ಮಡುವಿನಲ್ಲಿ ನಿವೃತ್ತ ಐಪಿಎಸ್ ಅಧಿಕಾರಿ ಶವ ಪತ್ತೆ

04:30 AM Feb 20, 2019 | Sharanya Alva |

ಕೋಲ್ಕತಾ:ನಿವೃತ್ತ ಐಪಿಎಸ್ ಅಧಿಕಾರಿ ಗೌರವ್ ಚಂದ್ರ ದತ್ತಾ ನಿಗೂಢವಾಗಿ ಸಾವನ್ನಪ್ಪಿರುವ ಘಟನೆ ಪಶ್ಚಿಮ ಬಂಗಾಳ ಲೇಕ್ ಪ್ರದೇಶದಲ್ಲಿ ಮಂಗಳವಾರ ಸಂಜೆ ನಡೆದಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

Advertisement

ಪೊಲೀಸ್ ವರದಿ ಪ್ರಕಾರ, ದತ್ತಾ ಅವರ ದೇಹ ರಕ್ತದ ಮಡುವಿನಲ್ಲಿ ಬಿದ್ದಿದ್ದು, ಮೃತದೇಹದ ಸಮೀಪ ಚೀಟಿಯೊಂದು ದೊರಕಿರುವುದಾಗಿ ಹೇಳಿದೆ. ತಮ್ಮ ಅಧಿಕಾರಾವಧಿಯಲ್ಲಿ ಹಲವಾರು ಪ್ರಮುಖ ಪ್ರಕರಣಗಳನ್ನು ಯಶಸ್ವಿಯಾಗಿ ಬೇಧಿಸಿದ್ದರು.

ದತ್ತಾ ದಕ್ಷ ಮತ್ತು ನಿಷ್ಠ ಅಧಿಕಾರಿಯಾಗಿ ಹೆಸರು ಪಡೆದಿದ್ದರು. ಕಳೆದ ವರ್ಷ ಅವರು ಐಪಿಎಸ್ ಸೇವೆಯಿಂದ ನಿವೃತ್ತರಾಗಿದ್ದರು. ಫ್ಲ್ಯಾಟ್ ನಲ್ಲಿ ಅವರು ಒಂಟಿಯಾಗಿದ್ದರು ಎಂದು ವರದಿ ವಿವರಿಸಿದೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next