Advertisement

Jammu and Kashmir: ಉಗ್ರರ ಗುಂಡೇಟಿಗೆ ಬಲಿಯಾದ ನಿವೃತ್ತ ಪೊಲೀಸ್‌ ಅಧಿಕಾರಿ

10:01 AM Dec 24, 2023 | Team Udayavani |

ಶ್ರೀನಗರ: ಉಗ್ರರ ಗುಂಡೇಟಿಗೆ ನಿವೃತ್ತ ಅಧಿಕಾರಿಯೊಬ್ಬರು ಬಲಿಯಾಗಿರುವ ಘಟನೆ ಬಾರಾಮುಲ್ಲಾ ಜಿಲ್ಲೆಯಲ್ಲಿ ಭಾನುವಾರ(ಡಿ.24 ರಂದು) ನಡೆದಿರುವುದು ವರದಿಯಾಗಿದೆ.

Advertisement

ನಿವೃತ್ತ ಹಿರಿಯ ಪೊಲೀಸ್ ವರಿಷ್ಠಾಧಿಕಾರಿ (ಎಸ್‌ಎಸ್‌ಪಿ) ಮೊಹಮ್ಮದ್ ಶಫಿ ಮಿರ್ ಉಗ್ರರು ನಡೆಸಿದ ಗುಂಡಿನ ದಾಳಿಯಲ್ಲಿ ಸಾವನ್ನಪ್ಪಿದ್ದಾರೆ.

ಅವರು ನಗರದ ಗಂಟಮುಲ್ಲಾ ಬಾಲಾ ಪ್ರದೇಶದ ಸ್ಥಳೀಯ ಮಸೀದಿಯಲ್ಲಿ ಪ್ರಾರ್ಥನೆ ಸಲ್ಲಿಸುತ್ತಿದ್ದಾಗ ಈ ಘಟನೆ ಸಂಭವಿಸಿರುವುದಾಗಿ ವರದಿಯಾಗಿದೆ.

“ಶಿರಿ ಬಾರಾಮುಲ್ಲಾದ ಗಂಟ್ಮುಲ್ಲಾದಲ್ಲಿ ನಿವೃತ್ತ ಪೊಲೀಸ್ ಅಧಿಕಾರಿ ಮೊಹಮ್ಮದ್ ಶಫಿ ಅವರು ಮಸೀದಿಯಲ್ಲಿ ಪ್ರಾರ್ಥನೆ ಮಾಡುವ ವೇಳೆ ಭಯೋತ್ಪಾದಕರು ಗುಂಡು ಹಾರಿಸಿದ ಪರಿಣಾಮ ಅವರು ಸಾವನ್ನಪ್ಪಿದ್ದಾರೆ. ಸದ್ಯ ಪ್ರದೇಶವನ್ನು ಸುತ್ತುವರೆದಿದ್ದು,ಹೆಚ್ಚಿನ ಮಾಹಿತಿ ಇನ್ನಷ್ಟೇ ಬರಬೇಕಿದೆ” ಎಂದು ಕಾಶ್ಮೀರ ವಲಯ ಪೊಲೀಸರು ಟ್ವೀಟ್‌ ಮಾಡಿ ತಿಳಿಸಿದ್ದಾರೆ.

ಕಳೆದ ತಿಂಗಳು ಶ್ರೀನಗರದ ಈದ್ಗಾ ಮಸೀದಿ ಬಳಿ ಭಯೋತ್ಪಾದಕರು ಗುಂಡು ಹಾರಿಸಿದ ನಂತರ ಪೊಲೀಸ್ ಇನ್ಸ್‌ಪೆಕ್ಟರ್ ಗಂಭೀರವಾಗಿ ಗಾಯಗೊಂಡಿದ್ದರು. ಘಟನೆಯ ನಂತರ ಅವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿತ್ತು.

Advertisement

ಶ್ರೀನಗರದ ಈದ್ಗಾ ಮೈದಾನದಲ್ಲಿ ಇನ್ಸ್‌ಪೆಕ್ಟರ್ ಮಸ್ರೂರ್ ಅಹ್ಮದ್ ವಾನಿ ಸ್ಥಳೀಯ ಹುಡುಗರೊಂದಿಗೆ ಕ್ರಿಕೆಟ್ ಆಡುತ್ತಿದ್ದಾಗ ಈ ಘಟನೆ ನಡೆದಿತ್ತು.

 

Advertisement

Udayavani is now on Telegram. Click here to join our channel and stay updated with the latest news.

Next