Advertisement

ರಾಷ್ಟ್ರೀಯ ಹಿತಾಸಕ್ತಿಗಾಗಿ ಕಾಯ್ದೆ ವಾಪಸ್‌: ಡಾ|ಕಲ್ಲಡ್ಕ ಪ್ರಭಾಕರ ಭಟ್‌

12:20 AM Nov 22, 2021 | Team Udayavani |

ಉಡುಪಿ: ರಾಜಕೀಯ ಲಾಭ ಉದ್ದೇಶದಿಂದ ಕೃಷಿ ಕಾಯ್ದೆ ವಾಪಸು ಪಡೆದದ್ದಲ್ಲ. ರಾಷ್ಟ್ರೀಯ ಹಿತಾಸಕ್ತಿಯನ್ನು ಗಮನದಲ್ಲಿಟ್ಟುಕೊಂಡು ವಾಪಸು ಪಡೆಯಲಾಗಿದೆ ಎಂದು ಆರ್‌ಎಸ್‌ಎಸ್‌ ಮುಖಂಡ ಡಾ| ಕಲ್ಲಡ್ಕ ಪ್ರಭಾಕರ ಭಟ್‌ ತಿಳಿಸಿದರು.

Advertisement

ರವಿವಾರ ನಗರದಲ್ಲಿ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಅವರು, ಎಲ್ಲ ಕಾಯ್ದೆ ಗಳನ್ನು ಬೀದಿಯಲ್ಲಿ ನಿಂತು ನಿರ್ಧರಿಸಲು ಸಾಧ್ಯವಿಲ್ಲ. ಕೃಷಿ ಕಾಯ್ದೆ ಕುರಿತು ಒಂದು ವರ್ಷ ಕೇಂದ್ರ ಸರಕಾರ ಮನವೊಲಿಸಲು ಪ್ರಯತ್ನ ಮಾಡಿದೆ. ಸರಕಾರ ಕೃಷಿ ಕಾಯ್ದೆ ವಾಪಸು ಪಡೆಯುವ ಮೂಲಕ ಒಂದು ಹೆಜ್ಜೆ ಹಿಂದೆ ಬಂದಿದೆ. ಇದರಲ್ಲಿ ಯಾವುದೇ ತಪ್ಪಿಲ್ಲ. ಮುಂದೆ ಎರಡು ಹೆಜ್ಜೆ ಮುಂದಿಡುತ್ತೇವೆ ಮತ್ತು ಸಣ್ಣಪುಟ್ಟ ತಿದ್ದುಪಡಿಯೊಂದಿಗೆ ಮತ್ತೆ ಮಂಡನೆ ಮಾಡುತ್ತೇವೆ ಎಂದರು.

ಇದನ್ನೂ ಓದಿ:ಭಾರತದಲ್ಲಿ ಬೂಸ್ಟರ್‌ ಡೋಸ್‌ ಲಸಿಕೆಯ ಅವಶ್ಯಕತೆಯಿಲ್ಲ : ಐಸಿಎಂಆರ್‌

ಒಳ್ಳೆಯ ಮಸೂದೆಯನ್ನು ವಾಪಸು ಪಡೆದುಕೊಳ್ಳಲಾಗಿದೆ ಎಂದು ಬೇಸರ ವ್ಯಕ್ತಪಡಿಸಿದ ಅವರು, ಕೂತು ಚರ್ಚಿಸಲು ಹೋರಾಟಗಾರರು ತಯಾರಿರ ಲಿಲ್ಲ. ವಿಪಕ್ಷ ಎಲ್ಲದಕ್ಕೂ ವಿರೋಧ ಮಾಡುವುದು ಸರಿಯಲ್ಲ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next