Advertisement

Chandigarh; ಚುನಾವಣಾಧಿಕಾರಿಗೆ ಅನಾರೋಗ್ಯ: ಚಂಡೀಗಢ ಚುನಾವಣೆ ಮುಂದೂಡಿಕೆ!

12:54 AM Jan 19, 2024 | Team Udayavani |

ಚಂಡೀಗಢ‌: ಚಂಡೀಗಢ ನಗರಸಭೆಯ ಮೇಯರ್‌ ಚುನಾವಣೆಗೆ ಮೈತ್ರಿ ಮಾಡಿಕೊಂಡು ಗೆಲ್ಲುವ ಉತ್ಸಾಹದಲ್ಲಿದ್ದ ಆಮ್‌ ಆದ್ಮಿ ಪಕ್ಷ ಮತ್ತು ಕಾಂಗ್ರೆಸ್‌ಗೆ ದೊಡ್ಡ ಆಘಾತವಾಗಿದೆ. ಚುನಾವಣ ಅಧಿಕಾರಿ ಅನಾರೋಗ್ಯಕ್ಕೆ ತುತ್ತಾಗಿದ್ದಾರೆ ಎಂಬ ಕಾರಣ ಹೇಳಿ ಗುರುವಾರ ನಡೆಯಬೇಕಿದ್ದ ಚುನಾವಣೆಯನ್ನು ಏಕಾಏಕಿ ಫೆ.6ಕ್ಕೆ ಮುಂದೂಡಲಾಗಿದೆ. ಇದರಿಂದ ಕೆಂಡಾಮಂಡಲವಾದ ಮಿತ್ರಪಕ್ಷಗಳು, ಉದ್ದೇಶಪೂರ್ವಕವಾಗಿಯೇ ಚುನಾವಣೆ ಮುಂದೂಡಲಾಗಿದೆ ಎಂದು ಆರೋಪಿಸಿವೆ. ಆಮ್‌ ಆದ್ಮಿ ಪಕ್ಷವು ಚುನಾವಣೆ ಮುಂದೂಡಿಕೆ ಪ್ರಶ್ನಿಸಿ ಪಂಜಾಬ್‌ ಮತ್ತು ಹರಿಯಾಣ ಹೈಕೋರ್ಟ್‌ನ ಮೆಟ್ಟಿಲೇರಿದೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next