Advertisement

ಎಲ್ಲ ಇಲಾಖೆಯಲ್ಲೂ ರೇವಣ್ಣ ಹಸ್ತಕ್ಷೇಪ

12:31 AM Jul 29, 2019 | Sriram |

ವಿಜಯಪುರ: ‘ಮೈತ್ರಿ ಸರ್ಕಾರದಲ್ಲಿ ಎಚ್.ಡಿ.ರೇವಣ್ಣ ಅವರು ನಾನು ನಿರ್ವಹಿಸುತ್ತಿದ್ದ ಆರೋಗ್ಯ ಇಲಾಖೆ ಸೇರಿ ಎಲ್ಲ ಇಲಾಖೆಗಳಲ್ಲೂ ಹಸ್ತಕ್ಷೇಪ ಮಾಡುತ್ತಿದ್ದರು. ಇದು ಹಲವು ಸಚಿವರಿಗೆ ಅಸಮಾಧಾನ ಉಂಟು ಮಾಡಿತ್ತು’ ಎಂದು ಸಮ್ಮಿಶ್ರ ಸರ್ಕಾರದಲ್ಲಿ ಆರೋಗ್ಯ ಸಚಿವರಾಗಿದ್ದ ಶಿವಾನಂದ ಪಾಟೀಲ ಅಸಮಾಧಾನ ವ್ಯಕ್ತಪಡಿಸಿದರು.

Advertisement

ಭಾನುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಆವರು, ಲೋಕೋಪಯೋಗಿ ಸಚಿವರಾಗಿದ್ದ ಎಚ್.ಡಿ.ರೇವಣ್ಣ ಎಲ್ಲ ಇಲಾಖೆಗಳಲ್ಲೂ ಹಸ್ತಕ್ಷೇಪ ಮಾಡುತ್ತಿದ್ದರು. ನಾನು ನಿರ್ವಹಿಸುತ್ತಿದ್ದ ಇಲಾಖೆಯೂ ಇದಕ್ಕೆ ಹೊರತಾಗಿರಲಿಲ್ಲ. ಶಾಸಕ ಭೀಮಾ ನಾಯಕ ಅವರನ್ನು ಕೆಎಂಎಫ್‌ ಅಧ್ಯಕ್ಷರನ್ನಾಗಿ ಮಾಡಲು ನಿರ್ಧರಿಸಲಾಗಿತ್ತು. ಆದರೆ, ಇದೀಗ ಎಚ್.ಡಿ.ರೇವಣ್ಣ ಅವರು ನಿರ್ದೇಶಕರನ್ನು ಹೈಜಾಕ್‌ ಮಾಡಿರುವ ಕ್ರಮ ಸರಿಯಲ್ಲ ಎಂದರು.

 

Advertisement

Udayavani is now on Telegram. Click here to join our channel and stay updated with the latest news.

Next