Advertisement

H.D. Revanna ಬಂಧನ: ಆಪ್ತರೊಂದಿಗೆ ಎಚ್‌ಡಿಕೆ ರಹಸ್ಯ ಮಾತುಕತೆ

11:57 PM May 04, 2024 | Team Udayavani |

ಬೆಂಗಳೂರು: ಅಪಹರಣ ಪ್ರಕರಣದಲ್ಲಿ ಸಹೋದರ ಎಚ್‌. ಡಿ. ರೇವಣ್ಣ ಅವರನ್ನು ಎಸ್‌ಐಟಿ ಬಂಧಿಸುತ್ತಿದ್ದಂತೆ ಮಾಜಿ ಸಿಎಂ ಎಚ್‌. ಡಿ.ಕುಮಾರಸ್ವಾಮಿ ಅವರು ಖಾಸಗಿ ಹೊಟೇಲ್‌ನಲ್ಲಿ ಆಪ್ತರೊಂದಿಗೆ ರಹಸ್ಯ ಮಾತುಕತೆ ನಡೆಸಿದರು.

Advertisement

ರೇವಣ್ಣ ಸಲ್ಲಿಸಿದ್ದ ನಿರೀಕ್ಷಣ ಜಾಮೀನು ಅರ್ಜಿಯ ವಿಚಾರಣೆ ಮಧ್ಯಾಹ್ನ ಆರಂಭವಾಗುತ್ತಿದ್ದಂತೆ ನಗರದ ಖಾಸಗಿ ಹೊಟೇಲೊಂದರಲ್ಲಿ ವಾಸ್ತವ್ಯ ಹೂಡಿದ ಕುಮಾರಸ್ವಾಮಿ ಪ್ರಕರಣದ ಮಾಹಿತಿ ಪಡೆದುಕೊಳ್ಳುತ್ತಿದ್ದರು. ಇದೇ ವೇಳೆ ಮಾಜಿ ಸಚಿವರಾದ ಜಿ.ಟಿ. ದೇವೇಗೌಡ, ಸಿ.ಎಸ್‌. ಪುಟ್ಟರಾಜು, ಯುವ ಜನತಾದಳ ಅಧ್ಯಕ್ಷ ನಿಖಿಲ್‌ ಕುಮಾರಸ್ವಾಮಿ ಮತ್ತಿತರ ಕೆಲವು ಆಪ್ತರ ಜತೆಗೆ ಕುಮಾರಸ್ವಾಮಿ ರಹಸ್ಯ ಮಾತುಕತೆ ನಡೆಸಿದರು. ಈ ವೇಳೆ ಮಂದಿನ ನಿರ್ಧಾರಗಳ ಬಗ್ಗೆ ಚರ್ಚಿಸಿದರು ಎನ್ನಲಾಗಿದೆ.

 

Advertisement

Udayavani is now on Telegram. Click here to join our channel and stay updated with the latest news.

Next