Advertisement

Telangana: ರೇವಂತ್ ರೆಡ್ಡಿ ತೆಲಂಗಾಣ ಸಿಎಂ ಆಗುವುದು ಬಹುತೇಕ ಖಚಿತ.. ನಾಳೆಯೇ ಪ್ರಮಾಣ ವಚನ ?

12:29 PM Dec 05, 2023 | Team Udayavani |

ಹೈದರಾಬಾದ್: ತೆಲಂಗಾಣದಲ್ಲಿ ರೇವಂತ್ ರೆಡ್ಡಿ ಮುಖ್ಯಮಂತ್ರಿಯಾಗುವುದು ಬಹುತೇಕ ಖಚಿತವಾಗಿದೆ. ರೇವಂತ್ ರೆಡ್ಡಿ ತೆಲಂಗಾಣ ಕಾಂಗ್ರೆಸ್ ರಾಜ್ಯಾಧ್ಯಕ್ಷರೂ ಆಗಿದ್ದಾರೆ. ಮೂಲಗಳ ಪ್ರಕಾರ ಹೈಕಮಾಂಡ್ ನ ಮೊದಲ ಆಯ್ಕೆ ಕೂಡ ರೇವಂತ್ ರೆಡ್ಡಿ ಆಗಿದ್ದರೆ. ಹಾಗಾಗಿ ನಾಳೆ ಅಥವಾ ಗುರುವಾರ ಅವರು ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸಬಹುದು ಎಂದು ಮೂಲಗಳು ತಿಳಿಸಿವೆ.

Advertisement

ಹಿರಿಯರಾದ ಉತ್ತಮ್ ಕುಮಾರ್ ರೆಡ್ಡಿ ಮತ್ತು ಭಟ್ಟಿ ವಿಕ್ರಮಾಕ್ ಕೂಡ ಸಿಎಂ ಸ್ಥಾನದ ಆಕಾಂಕ್ಷಿಯಾಗಿದ್ದಾರೆ ಎನ್ನಲಾಗಿದ್ದು ಆದರೆ ಹೈಕಮಾಂಡ್ ಅವರಿಗೆ ಉಪ ಮುಖ್ಯಮಂತ್ರಿ ಸ್ಥಾನ ಅಥವಾ ಉತ್ತಮ ಖಾತೆ ನೀಡುವ ಆಲೋಚನೆಯಲ್ಲಿದ್ದು ಆದರೆ ಮುಖ್ಯಮಂತ್ರಿ ಸ್ಥಾನದ ಕುರಿತು ಹೈಕಮಾಂಡ್ ಇದುವರೆಗೂ ಬಾಯಿ ಬಿಟ್ಟಿಲ್ಲ.

ಪಂಚರಾಜ್ಯ ಚುನಾವಣಾ ಫಲಿತಾಂಶಗಳ ಪೈಕಿ ತೆಲಂಗಾಣದಲ್ಲಿ ಕಾಂಗ್ರೆಸ್ ಸ್ಪಷ್ಟ ಬಹುಮತ ಪಡೆದಿದೆ. ಕರ್ನಾಟಕದ ನಂತರ, ತೆಲಂಗಾಣ ದಕ್ಷಿಣದ ಎರಡನೇ ರಾಜ್ಯವಾಗಿದ್ದು, ಅಲ್ಲಿ ಕಾಂಗ್ರೆಸ್ ತನ್ನದೇ ಆದ ಸರ್ಕಾರವನ್ನು ರಚಿಸುತ್ತಿದೆ. ತೆಲಂಗಾಣದಲ್ಲಿ ರಾಜ್ಯ ಕಾಂಗ್ರೆಸ್ ಅಧ್ಯಕ್ಷ ರೇವಂತ್ ರೆಡ್ಡಿ ಮೊದಲಿನಿಂದಲೂ ಸಿಎಂ ರೇಸ್‌ನಲ್ಲಿ ಮುಂಚೂಣಿಯಲ್ಲಿದ್ದರು.

ಅಲ್ಲದೆ ತೆಲಂಗಾಣ ವಿಧಾನಸಭಾ ಚುನಾವಣಾ ಪ್ರಚಾರದ ವೇಳೆ ರೇವಂತ್ ರೆಡ್ಡಿ ಕಾಂಗ್ರೆಸ್‌ನ ಮುಖವಾಗಿದ್ದರು. ಪ್ರಚಾರದ ಸಮಯದಲ್ಲಿ ಅವರು ಯಾವಾಗಲೂ ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿಯೊಂದಿಗೆ ಕಾಣುತ್ತಿದ್ದರು. ತೆಲಂಗಾಣದಲ್ಲಿ ಗೆಲುವಿನ ಗರಿಷ್ಠ ಶ್ರೇಯಸ್ಸು ರೇವಂತ್ ರೆಡ್ಡಿ ಅವರಿಗೆ ಸಲ್ಲುತ್ತದೆ. ಇದೇ ಕಾರಣಕ್ಕೆ ಅವರ ಹೆಸರು ಸಿಎಂ ಹುದ್ದೆಗೆ ಮುಂಚೂಣಿಯಲ್ಲಿ ಉಳಿಯಿತು. ರೇವಂತ್ ರೆಡ್ಡಿ ಪ್ರಸ್ತುತ ತೆಲಂಗಾಣ ಪ್ರದೇಶ ಕಾಂಗ್ರೆಸ್ ಅಧ್ಯಕ್ಷ. 2019 ರಲ್ಲಿ ಗೆದ್ದ ತೆಲಂಗಾಣದ ಮೂವರು ಕಾಂಗ್ರೆಸ್ ಲೋಕಸಭಾ ಸಂಸದರಲ್ಲಿ ರೆಡ್ಡಿ ಕೂಡ ಒಬ್ಬರು.

ಒಂದು ಅಂದುಕೊಂಡಂತೆ ನಡೆದರೆ, ಹೈಕಮಾಂಡ್ ಒಪ್ಪಿಗೆ ಸೂಚಿಸಿದರೆ ನಾಳೆ ಅಥವಾ ನಾಡಿದ್ದು ತೆಲಂಗಾಣದ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕಾರ ಮಾಡಲಿದ್ದಾರೆ.

Advertisement

ಇದನ್ನೂ ಓದಿ: Chikkamagaluru: ನೆರೆಮನೆಯ ನಾಯಿ ಬೊಗಳಿದ್ದಕ್ಕೆ ಮಾಲೀಕನ ಮೇಲೆ ಆಸಿಡ್ ದಾಳಿ

Advertisement

Udayavani is now on Telegram. Click here to join our channel and stay updated with the latest news.

Next