Advertisement

ರೇವಣ್ಣ ಬಹಿರಂಗ ಹೇಳಿಕೆ ನಿಲ್ಲಿಸಲಿ: ದಿನೇಶ್‌

12:35 AM Jan 05, 2019 | |

ಬೆಂಗಳೂರು: ಸಚಿವ ಎಚ್‌.ಡಿ. ರೇವಣ್ಣ ಮಿತ್ರಪಕ್ಷ ಕಾಂಗ್ರೆಸ್‌ ಬಗ್ಗೆ ಬಹಿರಂಗವಾಗಿ ಮಾತನಾಡುವುದನ್ನು ನಿಲ್ಲಿಸಬೇಕು ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್‌ ಗುಂಡೂರಾವ್‌ ಸಲಹೆ ನೀಡಿದ್ದಾರೆ.

Advertisement

ಪತ್ರಿಕಾಗೋಷ್ಠಿ ಯಲ್ಲಿ ಮಾತನಾಡಿದ ಅವರು, ನಿಗಮ ಮಂಡಳಿ ನೇಮಕ ಹಾಗೂ ಖಾತೆಗಳ ಬಗ್ಗೆ ಸಣ್ಣಪುಟ್ಟ ಗೊಂದಲಗಳಿದ್ದು, ಅವುಗಳ ಬಗ್ಗೆ ಲೋಕೋಪಯೋಗಿ ಸಚಿವ ರೇವಣ್ಣ ಅನಗತ್ಯ ಹೇಳಿಕೆ ನೀಡುವುದನ್ನು ನಿಲ್ಲಿಸಬೇಕು ಎಂದು ತಾಕೀತು ಮಾಡಿದರು. ನಿಗಮ ಮಂಡಳಿ ಅಧ್ಯಕ್ಷರ ನೇಮಕ ವಿಚಾರದಲ್ಲಿ ಜೆಡಿಎಸ್‌ನವರೂ ಪಟ್ಟಿಯನ್ನು ಸಿದ್ಧಪಡಿಸುತ್ತಿದ್ದಾರೆ. ಶೀಘ್ರವೇ ಅಧ್ಯಕ್ಷರ ಪಟ್ಟಿಗೆ ಮುಖ್ಯಮಂತ್ರಿ ಒಪ್ಪಿಗೆ ನೀಡುವ ಸಾಧ್ಯತೆ ಇದೆ. ಈ ಬಗ್ಗೆ ಯಾವುದೇ ನಾಯಕರು ಅನಗತ್ಯ ಹೇಳಿಕೆ ನೀಡ ಬಾರದು ಎಂದರು.

Advertisement

Udayavani is now on Telegram. Click here to join our channel and stay updated with the latest news.

Next