Advertisement

ರೇವಣ್ಣ ಹೇಳಿಕೆಗೆ ಕೈ ತಿರುಗೇಟು

12:30 AM Dec 30, 2018 | Team Udayavani |

ಬೆಂಗಳೂರು:  ಡಾ.ಜಿ.ಪರಮೇಶ್ವರ್‌ ಅವರನ್ನು ಗೃಹ ಖಾತೆಯಿಂದ ಕೈಬಿಡಬಾರದಿತ್ತು ಎಂಬ ಸಚಿವ ಎಚ್‌ಡಿ ರೇವಣ್ಣ ಹೇಳಿಕೆಗೆ ಕಾಂಗ್ರೆಸ್‌ನ ಸಚಿವರು ಬಹಿರಂಗವಾಗಿ ತಿರುಗೇಟು ನೀಡಿದ್ದಾರೆ.

Advertisement

ಕಾಂಗ್ರೆಸ್‌ ದಲಿತರು ಸೇರಿದಂತೆ ಎಲ್ಲ ವರ್ಗಗಳಿಗೂ ಸಮಾನ ಅವಕಾಶ ನೀಡುತ್ತಾ ಬಂದಿದ್ದು, ಕಾಂಗ್ರೆಸ್‌ ಪಕ್ಷವನ್ನು ಟೀಕಿಸುವ ಸಚಿವ ಎಚ್‌.ಡಿ.ರೇವಣ್ಣ ಅವರು ತಮ್ಮ ಪಕ್ಷದಿಂದ ಎಷ್ಟು ಮಂದಿ ದಲಿತರನ್ನು ಸಚಿವರನ್ನಾಗಿ ಮಾಡಿದ್ದಾರೆ ಎಂದು ಕಂದಾಯ ಸಚಿವ ಆರ್‌.ವಿ.ದೇಶಪಾಂಡೆ ಪ್ರಶ್ನಿಸಿದ್ದಾರೆ. ಕಾಂಗ್ರೆಸ್‌ ಪಕ್ಷವು ಸಮಾನತೆಯ ತತ್ವದಲ್ಲಿ ನಂಬಿಕೆ ಇಟ್ಟಿದೆ. ಹಾಗಾಗಿ ರೇವಣ್ಣ ಅವರ ಹೇಳಿಕೆ ಸತ್ಯಕ್ಕೆ ದೂರವಾದುದು ಎಂದು ಹೇಳಿದ್ದಾರೆ.

ದೇಶಪಾಂಡೆ ಹೇಳಿಕೆಗೆ ದನಿಗೂಡಿಸಿರುವ ಸಕ್ಕರೆ ಖಾತೆ ಸಚಿವ ಆರ್‌.ಬಿ.ತಿಮ್ಮಾಪುರ, ಸಂಪುಟ ವಿಸ್ತರಣೆಯಲ್ಲಿ ಜೆಡಿಎಸ್‌ನ ದಲಿತ ಶಾಸಕರೊಬ್ಬರನ್ನು ಸಚಿವರನ್ನಾಗಿ ಮಾಡುವ ಕೆಲಸ ರೇವಣ್ಣ ಅವರ ಕಡೆಯಿಂದ ಆಗಲಿ ಎಂದಿದ್ದಾರೆ. ದಲಿತರು ಎನ್ನುವ ಕಾರಣಕ್ಕೆ ಡಾ.ಜಿ.ಪರಮೇಶ್ವರ ಅವರನ್ನು ಕಾಂಗ್ರೆಸ್‌ನಲ್ಲಿ ತುಳಿಯಲಾಗುತ್ತಿದೆ ಎನ್ನುವ ಸಚಿವ ಎಚ್‌.ಡಿ.ರೇವಣ್ಣ ಹೇಳಿಕೆ ದಲಿತ ಮೇಲಿನ ಪ್ರೀತಿಯನ್ನು ತೋರಿಸಿದಂತಿದೆ. ಆಗಾಗ ರೇವಣ್ಣ ಅವರಿಗೆ ದಲಿತರ ಮೇಲೆ ಪ್ರೀತಿ ಹೆಚ್ಚಾಗುತ್ತದೆ. ಈ ಪ್ರೀತಿಗೆ ನಾವು ಧನ್ಯವಾದ ಅರ್ಪಿಸುತ್ತೇವೆ ಎಂದು ಅವರು ವ್ಯಂಗ್ಯವಾಡಿದ್ದಾರೆ. 

Advertisement

Udayavani is now on Telegram. Click here to join our channel and stay updated with the latest news.

Next