Advertisement

ಮೋದಿ ಸರ್ಕಾರದಿಂದ ಸೇಡಿನ ರಾಜಕಾರಣ: ಡಿ.ಕೆ.ಶಿವಕುಮಾರ್ ಟೀಕೆ

11:33 AM Jun 16, 2022 | Team Udayavani |

ಬೆಂಗಳೂರು; ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಸೇಡಿನ ಮತ್ತು ದ್ವೇಷದ ರಾಜಕಾರಣದಲ್ಲಿ ನಿರತವಾಗಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಟೀಕಿಸಿದರು.

Advertisement

ರಾಜಭವನ ಚಲೋ ಹಿನ್ನೆಲೆಯಲ್ಲಿ ಕೆಪಿಸಿಸಿ ಕಚೇರಿಯಲ್ಲಿ ಮಾತನಾಡಿದ ಅವರು ಕೇಂದ್ರ ಸರ್ಕಾರ ಬೆದರಿಕೆಗಳಿಗೆ ಕಾಂಗ್ರೆಸ್ ಮುಖಂಡು ಮತ್ತು ಕಾರ್ಯಕರ್ತರು ಬಗ್ಗುವುದಿಲ್ಲ ಎಂದರು.

ಹೋರಾಟ ಮಾಡುವುದು ನಮ್ಮ ಹಕ್ಕು. ಅದನ್ನು ನಾವು ಮಾಡುತ್ತಿದ್ದೇವೆ. ಪೊಲೀಸ್ ಬಳಕೆ ಮಾಡಿ ಹೋರಾಟ ಹತ್ತಿಕ್ಕುವು ಪ್ರಯತ್ನ ನಡೆದಿದೆ. ನಾವೆಲ್ಲರೂ ಜೈಲಿಗೆ ಹೋಗಲು ಸಿದ್ದ ಎಂದು ಹೇಳಿದರು.

ರಾಜಭವನ ಚಲೋ ಪ್ರತಿಭಟನೆಯಲ್ಲಿ ಮಾತನಾಡಿದ ಅವರು, ಇಂದಿರಾ ಗಾಂಧಿಯವರು, ರಾಜೀವ್ ಗಾಂಧಿ ಈ ದೇಶಕ್ಕೆ ಪ್ರಾಣ ತ್ಯಾಗ ಮಾಡಿದ್ದಾರೆ. ಇಂತಹ ಕುಟುಂಬಕ್ಕೆ ಕಿರುಕುಳ ಕೊಡುತ್ತಿದ್ದಾರೆ. ಇಂತಹ ನೀಚ ಸರ್ಕಾರದ ವಿರುದ್ಧ ನಮ್ಮ ಹೋರಾಟ. ನಾವು ರಾಜಭವನಕ್ಕೆ ಮುತ್ತಿಗೆ ಹಾಕುತ್ತೇವೆ ಎಂದರು.

ಈ ದೇಶದಲ್ಲಿ ಪ್ರಜಾಪ್ರಭುತ್ವ ಕಗ್ಗೊಲೆಯಾಗುತ್ತಿದೆ. ನಮ್ಮ ನಾಯಕರಾದ ಸೋನಿಯಾ ಗಾಂಧಿ, ರಾಹುಲ್ ಗಾಂಧಿಯವರಿಗೆ ಕಿರುಕುಳ ಕೊಡುತ್ತಿದ್ದಾರೆ. ಸೋನಿಯಾ ಗಾಂಧಿಯವರ ಕುಟುಂಬ 20000 ಕೋಟಿ ಆಸ್ತಿಯನ್ನ ದಾನ ಮಾಡಿದ್ದಾರೆ. ಅವರು ಟ್ರಸ್ಟಿನ ಆಸ್ತಿಯನ್ನು ತಮ್ಮದೆಂದು ಘೋಷಣೆ ಮಾಡಿಕೊಂಡಿಲ್ಲ. ನಮ್ಮ ಸರ್ಕಾರ ಮುಂದಿನ ದಿನದಲ್ಲಿ ಬರುವುದಿಲ್ಲ ಎಂದು ತಿಳಿದು ಈ ರೀತಿ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next