Advertisement

ಕಂದಾಯ ಅಧಿಕಾರಿಗೆ 4 ವರ್ಷ ಜೈಲು

02:34 PM Aug 18, 2018 | |

ಬೆಂಗಳೂರು: ಉದ್ಯಮಿಯೊಬ್ಬರು ಖರೀದಿಸಿದ್ದ  ಕೈಗಾರಿಕಾ ನಿವೇಶನದ ಖಾತಾ ಬದಲಾವಣೆ ಮಾಡಿಕೊಡಲು 20 ಸಾವಿರ ರೂ. ಲಂಚ ಸ್ವೀಕರಿಸುವ ವೇಳೆ ಸಿಕ್ಕಿಬಿದ್ದಿದ್ದ ಕಂದಾಯ ಅಧಿಕಾರಿಗೆ ನಾಲ್ಕು ವರ್ಷ ಜೈಲು ಶಿಕ್ಷೆ ವಿಧಿಸಿ ಲೋಕಾಯುಕ್ತ ವಿಶೇಷ ನ್ಯಾಯಾಲಯ ಆದೇಶಿಸಿದೆ.

Advertisement

2013ರ ಅವಧಿಯಲ್ಲಿ ಬಿಬಿಎಂಪಿಯ ಲಕ್ಷ್ಮೀದೇವಿನಗರ ಉಪವಿಭಾಗದ  ಕಂದಾಯ ನಿರೀಕ್ಷಕರಾಗಿ ಸೇವೆ ಸಲ್ಲಿಸುತ್ತಿದ್ದ ಬಿ.ಎಸ್‌.ಶ್ರೀರಾಮ್‌,  2013ರ ಅಕ್ಟೋಬರ್‌ 7ರಂದು ಆರೋಪಿ ಶ್ರೀರಾಮ್‌ರನ್ನು 20 ಸಾವಿರ ರೂ. ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಪೊಲೀಸರು ಬಂಧಿಸಿದ್ದರು.

ವಿಚಾರಣೆ ವೇಳೆ ಪ್ರಾಸಿಕ್ಯೂಶನ್‌ ವಾದ ಹಾಗೂ ಸಾಕ್ಷ್ಯಾಧಾರ ಪುರಸ್ಕರಿಸಿರುವ ನ್ಯಾ. ರವೀಂದ್ರ ಹೆಗ್ಡೆ, ಆರೋಪಿ ಶ್ರೀರಾಮ್‌ಗೆ ಭ್ರಷ್ಟಾಚಾರ ನಿಗ್ರಹ ಕಾಯಿದೆ ಸೆಕ್ಷನ್‌ 7ರ ಅನ್ವಯ 4 ವರ್ಷ ಜೈಲು ಹಾಗೂ 1 ಲಕ್ಷ ರೂ. ದಂಡ ವಿಧಿಸಿದ್ದಾರೆ.

ಅಲ್ಲದೆ, ದಂಡ ಪಾವತಿಸಲು ವಿಫ‌ಲವಾದರೆ ಹೆಚ್ಚುವರಿಯಾಗಿ ಆರು ತಿಂಗಳು ಜೈಲು ಶಿಕ್ಷೆ ಅನುಭವಿಸಬೇಕು ಎಂದು ತಿಳಿಸಿದ್ದಾರೆ. ಜತೆಗೆ ಭ್ರಷ್ಟಾಚಾರ ನಿಗ್ರಹ ಕಾಯಿದೆ ಕಲಂ 13 (1)ಡಿ ಹಾಗೂ (2)ರ ಅನ್ವಯ ನಾಲ್ಕು ವರ್ಷ ಜೈಲು ಹಾಗೂ 2 ಲಕ್ಷ ರೂ. ದಂಡ ಪಾವತಿಸಬೇಕು ಎಂದು ಆದೇಶಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next