Advertisement

ಕೋವಿಡ್ ಸಂಕಷ್ಟದಲ್ಲೂ ಅನ್ನ ಭಾಗ್ಯ ಯೋಜನೆಯ ಅಕ್ಕಿ ಕಳ್ಳಸಾಗಣೆ!

07:10 PM Apr 07, 2020 | keerthan |

ಶಿವಮೊಗ್ಗ: ದೇಶದ್ಯಾಂತ ಕೋವಿಡ್-19 ಸೋಂಕು ಹಿನ್ನಲೆಯಲ್ಲಿ ಲಾಕ್ ಡೌನ್ ಘೋಷಿಸಿರುವುದರ ನಡುವೆಯೇ ಅನ್ನಭಾಗ್ಯ ಯೋಜನೆಯ ಅಕ್ಕಿ ಕಳ್ಳ ಸಾಗಣೆ ಮಾಡುತ್ತಿದ್ದ ಜಾಲವನ್ನು ಪೊಲೀಸರುನ ಬೇಧಿಸಿದ್ದಾರೆ.

Advertisement

ಶಿವಮೊಗ್ಗ ಹೊರವಲಯದ ಕಲ್ಲೂರು ಮಂಡ್ಲಿಯ ಎರಡು ಕಡೆ ಆಹಾರ ಹಾಗೂ ಪೊಲೀಸ್ ಸಿಬ್ಬಂದಿ ದಾಳಿ ನಡೆಸಿ ಸುಮಾರು 300 ಕ್ಕೂ ಹೆಚ್ಚು ಚೀಲ ಅನ್ನಭಾಗ್ಯ ಅಕ್ಕಿ ವಶಪಡಿಸಿಕೊಂಡಿದ್ಧಾರೆ.

ಈ ಖದೀಮರು  ಅಕ್ರಮವಾಗಿ ಅಕ್ಕಿ ಸಾಗಿಸುತ್ತಿದ್ದ ವಾಹನಗಳ ಮೇಲೆ ಅಗತ್ಯ ಸೇವೆಗಳು ಎಂದು ನಕಲಿ ಬೋರ್ಡ್ ಹಾಕಿದ್ದರು. ಈ  ನಕಲಿ ಬೋರ್ಡ್ ಬಳಸಿ ಅನ್ನಭಾಗ್ಯ ಅಕ್ಕಿ ಕಳ್ಳಸಾಗಣೆ ಮಾಡುತ್ತಿದ್ದರು ಎನ್ನಲಾಗಿದೆ.

ಎರಡು ಕಡೆ ಅಕ್ರಮವಾಗಿ ಅನ್ನಭಾಗ್ಯ ಅಕ್ಕಿ ಸಂಗ್ರಹಿಸಿ ಬೇರೆ ಬೇರೆ ಬ್ರಾಂಡ್ ನಲ್ಲಿ ಅಕ್ಕಿ ಮಾರಾಟಕ್ಕೆ ಈ ಖದೀಮರು ಮುಂದಾಗಿದ್ದರು. ಖಚಿತ ಮಾಹಿತಿ ಮೇರೆಗೆ ದಾಳಿ‌ ನಡೆಸಿದ ಆಹಾರ ಇಲಾಖೆ ಹಾಗೂ ಪೊಲೀಸ್ ಇಲಾಖೆ ಸಿಬ್ಬಂದಿ ಸುಮಾರು 300ಕ್ಕೂ ಹೆಚ್ಚು ಮೂಟೆ ಅಕ್ಕಿ ವಶಪಡಿಸಿಕೊಂಡಿದ್ದಾರೆ. ಇದರೊಂದಿಗೆ ದಾಳಿ ವೇಳೆ ಐದು ವಾಹನಗಳ ವಶಪಡಿಸಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next