Advertisement

ಶ್ರೀಮಂತ ಪಾಟೀಲ್ ಅಪಹರಣ: ‘ಕೈ’ದೂರು

01:29 AM Jul 19, 2019 | Team Udayavani |

ಬೆಂಗಳೂರು: ಕಾಂಗ್ರೆಸ್‌ನ ಕಾಗವಾಡ ಕ್ಷೇತ್ರದ ಶಾಸಕ ಶ್ರೀಮಂತ ಪಾಟೀಲ್ ಅವರನ್ನು ಅಪಹರಣ ಮಾಡಲಾಗಿದೆ ಎಂದು ಕಾಂಗ್ರೆಸ್‌ ವತಿಯಿಂದ ನಗರ ಪೊಲೀಸ್‌ ಆಯುಕ್ತ ಅಲೋಕ್‌ಕುಮಾರ್‌ಗೆ ದೂರು ಸಲ್ಲಿಸಲಾಗಿದೆ.

Advertisement

ಕೆಪಿಸಿಸಿ ಕಾರ್ಯದರ್ಶಿ ನಟರಾಜ್‌ ಗೌಡ ಹಾಗೂ ವಕ್ತಾರ ಮಂಜುನಾಥ ಅದ್ದೆ ದೂರು ಸಲ್ಲಿಸಿದ್ದು, ರಾಜ್ಯ ಸರ್ಕಾರದ ವಿಶ್ವಾಸಮತ ಯಾಚನೆಯನ್ನು ವಿಫ‌ಲಗೊಳಿಸಲು ಬಿಜೆಪಿಯ ಮಾಜಿ ಶಾಸಕ ಲಕ್ಷ್ಮಣ ಸವದಿ, ಶ್ರೀಮಂತ ಪಾಟೀಲ್ ಅವರನ್ನು ಅಪಹರಣಗೊಳಿಸಿದ್ದಾರೆ. ಶ್ರೀಮಂತ ಪಾಟೀಲ್ ಅವರಿಗೆ ಕಾಂಗ್ರೆಸ್‌ ಪಕ್ಷದ ವತಿಯಿಂದ ವಿಪ್‌ ಜಾರಿಗೊಳಿಸಲಾಗಿದೆ. ಅವರನ್ನು ಕಾನೂನು ಬಾಹಿರವಾಗಿ ಅಪಹರಿಸಿ, ಸರ್ಕಾರವನ್ನು ಪತನಗೊಳಿಸುವ ಹುನ್ನಾರ ಅಡಗಿದೆ. ಇದೊಂದು ಗಂಭೀರ ಪ್ರಕರಣವಾಗಿರುವುದರಿಂದ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದ್ದಾರೆ.

ಆದರೆ, ಶ್ರೀಮಂತ ಪಾಟೀಲ್ ಅವರು ತಮ್ಮ ಆರೋಗ್ಯದ ಬಗ್ಗೆ ಸ್ಪಷ್ಟನೆ ನೀಡಿದ್ದು, ‘ನನಗೆ ಎದೆ ನೋವು ಕಂಡ ತಕ್ಷಣ ನಾನು ಚಿಕಿತ್ಸೆಗೆ ಮುಂಬೈಗೆ ಬಂದಿದ್ದೇನೆ. ಇನ್ನೂ ಎದೆಯಲ್ಲಿ ನೋವು ಇದೆ. ಹೀಗಾಗಿ, ವೈದ್ಯರ ಸಲಹೆ ಮೇರೆಗೆ ಆಸ್ಪತ್ರೆಯಲ್ಲಿದ್ದೇನೆ’ ಎಂದು ವೀಡಿಯೋ ಬಿಡುಗಡೆ ಮಾಡಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next