Advertisement
ತಹಶೀಲ್ದಾರ್ ಯಾಕೆ ಬಂದಿಲ್ಲ? ಇದು ಅವರು ಗೈರಾಗುತ್ತಿರುವ ಸತತ ಮೂರನೇ ಸಾಮಾನ್ಯ ಸಭೆ. ರೈತರ ಬೆಳೆವಿಮೆ ಪರಿಹಾರ, ಪಡಿತರ ಚೀಟಿ ಹೀಗೆ ಎಲ್ಲದಕ್ಕೂ ಅವರಿಂದಲೇ ನಮಗೆ ಉತ್ತರ ಬೇಕು. ಅವರಿಲ್ಲ ಎಂದಾದ ಮೇಲೆ ಈ ಸಭೆಯನ್ನೇ ಮುಂದೂಡಿ ಎಂದು ತಾಪಂ ಸದಸ್ಯರು ಆಕ್ರೋಶ ವ್ಯಕ್ತಪಡಿಸಿದರು.
Related Articles
Advertisement
ಮುಂದಿನ ಸಭೆಗಾದ್ರೂ ಬನ್ನಿ ಎಂದು ಖಾರವಾಗಿ ನುಡಿದರು. ಸದಸ್ಯರ ಪ್ರಶ್ನೆಗೆ ಯಾವುದೇ ಪ್ರತಿಕ್ರಿಯೆ ನೀಡದೇ ತಹಶೀಲ್ದಾರ್ ಕುದರಿ ಸುಮ್ಮನೆ ನಿಂತಿದ್ದರು. ಆಗ ಮಧ್ಯ ಪ್ರವೇಶಿಸಿದ ಅಧ್ಯಕ್ಷ, ಉಪಾಧ್ಯಕ್ಷ ಹಾಗೂ ಇಒ ಸರ್ವ ಸದಸ್ಯರನ್ನು ಸಮಾಧಾನಪಡಿಸಿ ಸಭೆಯನ್ನು ಡಿ. 13ಕ್ಕೆ ಮುಂದೂಡಿದ ಬಗ್ಗೆ ಮತ್ತೂಮ್ಮೆ ಪ್ರಸ್ತಾಪಿಸಿದರು.
ಪ್ರಗತಿ ಪರಿಶೀಲನೆ: ಹಿಂಗಾರಿ ಬೆಳೆ ವಿಮೆ ತುಂಬುವ ಅವಧಿ ಮುಗಿದು ಹೋಗಿದ್ದು, ಸರಿಯಾಗಿ ಮಾಹಿತಿ ಇಲ್ಲದೇ ಅನೇಕರು ಬೆಳೆ ವಿಮೆ ತುಂಬಿಲ್ಲ. ಈ ವಿಷಯದಲ್ಲಿ ಗ್ರಾಮ ಸೇವಕರು ಪ್ರಚಾರ ಮಾಡಿರಲಿಲ್ಲ ಆರೋಪಿಸಿದರು. ಅದಕ್ಕೆ ಪ್ರತಿಕ್ರಿಯಿಸಿದ ಕೃಷಿ ಇಲಾಖೆ ಅಧಿಕಾರಿ ಹಿರೇಮಠ, ನಾವು ಪ್ರತಿ ಗ್ರಾಮಕ್ಕೂ ಬೆಳೆ ವಿಮೆ ತುಂಬುವ ಬಗ್ಗೆ ಕರಪತ್ರ ಹಂಚಿದ್ದೇವೆ.
ಈ ಹಿಂದಿನ ಬೆಳೆ ವಿಮೆ ಪರಿಹಾರ ವಿತರಣೆಗೆ ಇನ್ಸೂರೆನ್ಸ್ ಕಮಿಟಿ ನೇಮಿಸಲಾಗಿದ್ದು, ಅದರಿಂದ ವರದಿ ಬಂದ ನಂತರ ವಿಮೆ ಹಣ ರೈತರ ಖಾತೆಗೆ ಜಮೆ ಆಗಲಿದೆ ಎಂದು ತಿಳಿಸಿದರು. ತಾಪಂ ಉಪಾಧ್ಯಕ್ಷ ಮುತ್ತಪ್ಪ ನಾಯ್ಕರ, ಸ್ಥಾಯಿ ಸಮಿತಿ ಅಧ್ಯಕ್ಷ ಫಕ್ಕೀರಪ್ಪ ಬುಡ್ಡಿಕಾಯಿ ಇತರರಿದ್ದರು.