Advertisement

ರೈಲಿಗೆ ತಲೆಕೊಟ್ಟು ರಿಕ್ಷಾ ಚಾಲಕ ಆತ್ಮಹತ್ಯೆ

10:09 AM Aug 24, 2019 | Hari Prasad |

ಮುಲ್ಕಿ: ಇಲ್ಲಿನ ಹಳೆಯಂಗಡಿ ಕೊಪ್ಪಲ ಬಳಿಯ ರೈಲ್ವೇ ಹಳಿಯ ಮೇಲೆ ಸ್ಥಳೀಯ ರಿಕ್ಷಾ ಚಾಲಕರೊಬ್ಬರ ಶವ ಪತ್ತೆಯಾಗಿದೆ. ಚಲಿಸುತ್ತಿದ್ದ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ.

Advertisement

ಕೊಳುವೈಲು ನಿವಾಸಿ ನವೀನ್ ಕರ್ಕಡ (44) ಎಂಬ ವ್ಯಕ್ತಿಯೇ ಮೃತಪಟ್ಟವರಾಗಿದ್ದಾರೆ. ಇವರು ಹಳೆಯಂಗಡಿಯಲ್ಲಿ ರಿಕ್ಷಾ ಚಾಲನಾ ವೃತ್ತಿಯನ್ನು ನಡೆಸಿಕೊಂಡಿದ್ದರು.

ನವೀನ್ ಅವರು ಕೆಲವು ಸಮಯಗಳಿಂದ ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದರು. ಐದು ವರ್ಷಗಳ ಹಿಂದೆ ಇವರ ಪತ್ನಿ ಮೃತಪಟ್ಟಿದ್ದರು. ಇವರಿಗೆ ಇಬ್ಬರು ಪುತ್ರರಿದ್ದಾರೆ.

ಮುಲ್ಕಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next