Advertisement

Mangaluru: ರೈಲು ನಿಲ್ದಾಣದ ಬಳಿ ಗಲಾಟೆ; ಪ್ರಕರಣ ದಾಖಲು

08:40 PM May 09, 2024 | Team Udayavani |

ಮಂಗಳೂರು: ನಗರದ ಸೆಂಟ್ರಲ್‌ ರೈಲು ನಿಲ್ದಾಣದ ಬಳಿ ಬುಧವಾರ ಆಟೋರಿಕ್ಷಾ ಚಾಲಕರು, ರೈಲು ಪ್ರಯಾಣಿಕರು ಮತ್ತು ಇತರ ಕೆಲವು ಮಂದಿಯ ನಡುವೆ ನಡೆದ ಘರ್ಷಣೆಗೆ ಸಂಬಂಧಿಸಿದಂತೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Advertisement

ಮಂಗಳೂರು ದಕ್ಷಿಣ ಠಾಣೆಯ ಪೊಲೀಸರು ಘಟನೆಯ ವೀಡಿಯೋವನ್ನು ಆಧರಿಸಿ ಸುಮಾರು 7 ಮಂದಿಯ ಮೇಲೆ ಸ್ವಯಂಪ್ರೇರಿತವಾಗಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

ಹಿನ್ನೆಲೆ :

ರೈಲಿನಲ್ಲಿ ಬಂದ ದಂಪತಿಯನ್ನು ಕರೆದುಕೊಂಡು ಹೋಗಲು ದ್ವಿಚಕ್ರ ವಾಹನದಲ್ಲಿ ಇಬ್ಬರು ಬಂದಿದ್ದರು. ಅವರು ವಾಹನವನ್ನು ರೈಲು ನಿಲ್ದಾಣದ ಬಳಿ ಪಾರ್ಕಿಂಗ್‌ ಮಾಡಿದ್ದರು. ಈ ವಿಚಾರವಾಗಿ ಪಾರ್ಕಿಂಗ್‌ ವ್ಯವಸ್ಥೆ ನೋಡಿಕೊಳ್ಳುವವರು ಮತ್ತು ಆಟೋರಿಕ್ಷಾ ಚಾಲಕರು ಆಕ್ಷೇಪ ವ್ಯಕ್ತಪಡಿಸಿ ರೈಲು ಪ್ರಯಾಣಿಕರು ಹಾಗೂ ಇತರ ಇಬ್ಬರನ್ನು ತರಾಟೆಗೆ ತೆಗೆದುಕೊಂಡಿದ್ದರು. ಆ ಸಂದರ್ಭದಲ್ಲಿ ವಾಗ್ವಾದ, ತಳ್ಳಾಟ, ಗಲಾಟೆ ನಡೆದಿತ್ತು. ಇದರ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿತ್ತು.

 

Advertisement
Advertisement

Udayavani is now on Telegram. Click here to join our channel and stay updated with the latest news.

Next