Advertisement

ಪುತ್ರನ ಹೆಸರಿನಲ್ಲಿ ಚಿರತೆ ದತ್ತು ಪಡೆದ ನಟ-ನಿರ್ದೇಶಕ ರಿಷಬ್ ಶೆಟ್ಟಿ

03:33 PM Jul 21, 2021 | Team Udayavani |

ಬೆಂಗಳೂರು: ಲಾಕ್ ಡೌನ್ ಪರಿಣಾಮ ಆರ್ಥಿಕ ಸಂಕಷ್ಟದಲ್ಲಿರುವ ಮೃಗಾಲಯಗಳ ನೆರವಿಗೆ ಧಾವಿಸುವಂತೆ ನಟ ದರ್ಶನ್ ನೀಡಿದ ಕರೆಗೆ ವ್ಯಾಪಕ ಬೆಂಬಲ ವ್ಯಕ್ತವಾಗುತ್ತಿದೆ. ಈಗಾಗಲೇ ಕನ್ನಡ ಚಿತ್ರರಂಗದ ನಟ-ನಟಿಯರು ಹಾಗೂ ದರ್ಶನ್ ಅಭಿಮಾನಿಗಳು ರಾಜ್ಯದ ವಿವಿಧ ಮೃಗಾಲಯದಲ್ಲಿರುವ ಪ್ರಾಣಿಗಳನ್ನು ದತ್ತು ಪಡೆಯುವ ಮೂಲಕ ಅಭಿಯಾನಕ್ಕೆ ಬೆಂಬಲ ನೀಡಿದ್ದಾರೆ. ಇದೀಗ ಕನ್ನಡ ಚಿತ್ರರಂಗದ ಪ್ರತಿಭಾವಂತ ನಟ ಹಾಗೂ ನಿರ್ದೇಶಕ ರಿಷಬ್ ಶೆಟ್ಟಿಯವರು ಕೂಡ ಸಾಥ್ ನೀಡಿದ್ದ ಚಿರತೆಯೊಂದನ್ನು ದತ್ತು ಪಡೆದಿದ್ದಾರೆ.

Advertisement

ರಿಷಬ್‌ ಶೆಟ್ಟಿ ತಮ್ಮ ಪುತ್ರ ರಣ್ವಿತ್‌ ಶೆಟ್ಟಿ ಹೆಸರಿನಲ್ಲಿ ಒಂದು ವರ್ಷದ ಅವಧಿಗೆ ಇಂಡಿಯನ್‌ ಲೆಪರ್ಡ್‌(ಚಿರತೆ) ದತ್ತು ಪಡೆದಿದ್ದಾರೆ. ‘ಮೈಸೂರು ಮೃಗಾಲಯದ ವತಿಯಿಂದ ರಣ್ವಿತ್‌ ಶೆಟ್ಟಿ, ರಿಷಬ್ ಶೆಟ್ಟಿಗೆ ಧನ್ಯವಾದಗಳನ್ನು ತಿಳಿಸುತ್ತೇವೆ. ನಿಮ್ಮ ಒಂದೊಳ್ಳೆ ಕೆಲಸದಿಂದ ಅನೇಕರು ಸ್ಫೂರ್ತಿಗೊಂಡು ಪ್ರಾಣಿಗಳನ್ನು ದತ್ತು ತೆಗೆದುಕೊಳ್ಳಲು ಮುಂದಾಗುತ್ತಾರೆ,’ ಎಂದು ಪತ್ರದ ಮೂಲಕ ಚಾಮರಾಜೇಂದ್ರ ಮೃಗಾಲಯ ಧನ್ಯವಾದ ತಿಳಿಸಿದೆ.

ಇನ್ನು ಲಾಕ್ ಡೌನ್ ತೆರವಾದ ಬಳಿಕ ಸಿನಿಮಾ ಚಟುವಟಿಕೆಗಳು ಪುನಃ ಪ್ರಾರಂಭವಾಗಿದ್ದು, ರಿಷಬ್ ಶೆಟ್ಟಿ ಅವರು ಸಿನಿಮಾ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದಾರೆ. ಸದ್ಯ ಅವರು ಶೆಟ್ಟಿ ಬೆಲ್ ಬಾಟಂ 2, ಗರುಡ ಗಮನ ವೃಷಭಾ ವಾಹನ, ಹರಿಕಥೆ ಅಲ್ಲ ಗಿರಿಕತೆ, ರುದ್ರ ಪ್ರಯಾಗ ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next