Advertisement

ಇಂದಿನಿಂದ ರಿಷಭ್‌ ‘ಹರಿಕಥೆ ಅಲ್ಲ ಗಿರಿಕಥೆ’ಶುರು

08:17 AM Jun 23, 2022 | Team Udayavani |

ರಿಷಭ್‌ ಶೆಟ್ಟಿ ನಾಯಕರಾಗಿ ನಟಿಸಿರುವ “ಹರಿಕಥೆ ಅಲ್ಲ ಗಿರಿಕಥೆ’ ಚಿತ್ರ ಇಂದು ತೆರೆಕಾಣುತ್ತಿದೆ. ಈಗಾಗಲೇ ಬಿಡುಗಡೆಯಾಗಿರುವ ಚಿತ್ರದ ಟ್ರೇಲರ್‌ ಹಿಟ್‌ಲಿಸ್ಟ್‌ ಸೇರುವ ಮೂಲಕ ಚಿತ್ರದ ಮೇಲಿನ ನಿರೀಕ್ಷೆ ಕೂಡಾ ಹೆಚ್ಚಾಗಿದೆ. ಸಂದೇಶ್‌ ಪ್ರೊಡಕ್ಷನ್ ಲಾಂಛನದಲ್ಲಿ ಸಂದೇಶ್‌. ಎನ್‌ ನಿರ್ಮಿಸಿರುವ ಈ ಚಿತ್ರವನ್ನು ಕರಣ್‌ ಅನಂತ್‌ ಹಾಗೂ ಅನಿರುದ್ಧ್ ಮಹೇಶ್‌ ನಿರ್ದೇಶನ ಮಾಡಿದ್ದಾರೆ.

Advertisement

ಚಿತ್ರದ ಬಗ್ಗೆ ಮಾತನಾಡುವ ರಿಷಭ್‌ ಶೆಟ್ಟಿ, “ಸಿನಿಮಾ ನಿರ್ದೇಶಕನಾಗುವ ಆಸೆ ಹೊತ್ತ ಮಧ್ಯಮ ವರ್ಗದ ಯುವಕನೊಬ್ಬನ ಸುತ್ತ ನಡೆಯುವ ಕಥೆ ಇದು. ಇದರಲ್ಲಿ ನಾನು ಗಿರಿಕೃಷ್ಣ ಎಂಬ ಪಾತ್ರ ಮಾಡಿದ್ದೀನಿ. ಗಿರಿ ಅಂದರೆ ನಾನೊಬ್ಬನ ಹೆಸರಲ್ಲ. ಹೀರೋಯಿನ್‌ ಹೆಸರು ಗಿರಿಜಾ ಥಾಮಸ್‌ ಹಾಗೂ ವಿಲನ್‌ ಹೆಸರು ಗಿರಿ ಅಂತ. ಹೀಗೆ ನಮ್ಮ ಚಿತ್ರದಲ್ಲಿ ಹಲವು ಗಿರಿಗಳ ಸಂಗಮವಾಗಿದೆ. ಸಿನಿಮಾ ಮಾಡಲು ಹೊರಟಿರುವ ಅನೇಕರ ಕಥೆಯಿದು. ಕಲಾವಿದರು ಹಾಗೂ ತಂತ್ರಜ್ಞರ ಸಹಕಾರದಿಂದ ಚಿತ್ರ ಚೆನ್ನಾಗಿ ಮೂಡಿಬಂದಿದೆ’ ಎಂದರು ರಿಷಭ್‌ ಶೆಟ್ಟಿ.

ಇದನ್ನೂ ಓದಿ:80, 90ರ ದಶಕಗಳಲ್ಲಿ ಹೆಸರುವಾಸಿಯಾಗಿದ್ದ “ಕಾಂಟೆಸ್ಸಾ’ ಕಾರು ಮತ್ತೆ ಮಾರುಕಟ್ಟೆಗೆ !

“ನಮ್ಮ ಚಿತ್ರತಂಡದ ಸಹಕಾರದಿಂದ ಚೆನ್ನಾಗಿ ಬಂದಿದೆ. ನಾನು ಹಾಗೂ ರಿಷಭ್‌ ಕಥಾಸಂಗಮ ಚಿತ್ರದಲ್ಲಿ ಒಟ್ಟಾಗಿ ಕೆಲಸ ಮಾಡಿದ್ದೆವು. ಗಿರಿಕೃಷ್ಣ ಈ ಚಿತ್ರದ ಕಥೆ ಬರೆದಿದ್ದರು. ಆ ನಂತರ ನಾನು ಹಾಗೂ ಅನಿರುದ್ಧ್ ಮಹೇಶ್‌ ಸೇರಿ ಈ ಚಿತ್ರ ನಿರ್ದೇಶನ ಮಾಡಿದ್ದೇವೆ’ ಎನ್ನುವುದು ನಿರ್ದೇಶಕರಲ್ಲೊಬ್ಬರಾದ ಕರಣ್‌ ಅನಂತ್‌ ಮಾತು.

ನಾಯಕಿ ರಚನಾ ಇಂದರ್‌ ಈ ಚಿತ್ರದಲ್ಲಿ ಗಿರಿಜಾ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಸಿನಿಮಾ ನಟಿಯಾಗಬೇಕೆಂಬ ಆಸೆ ಹೊತ್ತ ಹುಡುಗಿಯ ಪಾತ್ರವಂತೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next