ಡೆಹ್ರಾಡೂನ್: ಭಾರತದ ವಿಕೆಟ್ ಕೀಪರ್ ಬ್ಯಾಟ್ಸ್ಮನ್ ರಿಷಬ್ ಪಂತ್ ಅವರನ್ನು ಉತ್ತರಾಖಂಡ್ ರಾಜ್ಯದ ಬ್ರಾಂಡ್ ಅಂಬಾಸಿಡರ್ ಆಗಿ ನೇಮಿಸಲಾಗಿದೆ ಎಂದು ಉತ್ತರಾಖಂಡ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಭಾನುವಾರ ಘೋಷಿಸಿದ್ದಾರೆ.
ಈ ಬಗ್ಗೆ ಟ್ವಿಟ್ ಮಾಡಿರುವ ಮುಖ್ಯಮಂತ್ರಿ ಧಾಮಿ, ರಿಷಭ್ ಪಂತ್ ಯುವಕರನ್ನು ಕ್ರೀಡೆಯಲ್ಲಿ ತೊಡಗಿಸಿಕೊಳ್ಳಲು ಪ್ರೋತ್ಸಾಹಿಸಲಿದ್ದಾರೆ ಎಂದು ಹೇಳಿದ್ದಾರೆ.
” ರಾಜ್ಯದ ಯುವಕರನ್ನು ಕ್ರೀಡೆ ಮತ್ತು ಸಾರ್ವಜನಿಕ ಆರೋಗ್ಯದ ಕಡೆಗೆ ಪ್ರೋತ್ಸಾಹಿಸುವ ಉದ್ದೇಶದಿಂದ ಭಾರತದ ಅತ್ಯುತ್ತಮ ಕ್ರಿಕೆಟ್ ಆಟಗಾರರಲ್ಲಿ ಒಬ್ಬರು, ಯುವಕರ ರೋಲ್ ಮಾಡೆಲ್ ಮತ್ತು ಉತ್ತರಾಖಂಡದ ಪುತ್ರ ರಿಷಬ್ ಪಂತ್ ಅವರನ್ನು ನಮ್ಮ ಸರ್ಕಾರವು ‘ರಾಜ್ಯ ಬ್ರಾಂಡ್ ಅಂಬಾಸಿಡರ್’ ಆಗಿ ನೇಮಿಸಿದೆ ಎಂದು ಅವರು ಹೇಳಿದ್ದಾರೆ.
ಇದನ್ನೂ ಓದಿ:36 ವರ್ಷಗಳ ಬಳಿಕ ಈಡೇರಿತು ಕಿಚ್ಚನ ಆಸೆ: ಫೋಟೋ ಹಿಂದಿದೆ ಇಂಟರೆಸ್ಟಿಂಗ್ ಕಹಾನಿ!
“ಉತ್ತರಾಖಂಡದ ಜನರಲ್ಲಿ ಕ್ರೀಡೆ ಮತ್ತು ಆರೋಗ್ಯವನ್ನು ಉತ್ತೇಜಿಸುವ ಬ್ರಾಂಡ್ ಅಂಬಾಸಿಡರ್ ಆಗಲು ನನಗೆ ಅವಕಾಶ ನೀಡಿದ ಪುಷ್ಕರ್ ಸಿಂಗ್ ಧಾಮಿ ಸರ್ ಅವರಿಗೆ ಧನ್ಯವಾದಗಳು. ಈ ಉದ್ದೇಶವನ್ನು ಪ್ರಚಾರ ಮಾಡಲು ನಾನು ನನ್ನ ಕೈಲಾದಷ್ಟು ಪ್ರಯತ್ನಿಸುತ್ತೇನೆ” ಎಂದು ಪಂತ್ ಟ್ವೀಟ್ ಮಾಡಿದ್ದಾರೆ.