Advertisement

ಮತದಾನ ಜಾಗೃತಿ ಕಾರ್ಯದಲ್ಲಿ ರಿಷಬ್‌ ಪಂತ್‌

12:30 AM Mar 13, 2019 | |

ಹೊಸದಿಲ್ಲಿ: ವಿಕೆಟ್‌ ಕೀಪರ್‌, ಬ್ಯಾಟ್ಸ್‌ಮನ್‌ ರಿಷಬ್‌ ಪಂತ್‌ ಅವರು ಮುಂಬರುವ ಲೋಕಸಭಾ ಚುನಾವಣೆ ವೇಳೆ ಯುವಜನಾಂಗದಲ್ಲಿ ಮತದಾನ ಜಾಗೃತಿ ಮೂಡಿಸುವ ಕಾರ್ಯದಲ್ಲಿ ತೊಡಗಿಸಿಕೊಳ್ಳಲಿದ್ದಾರೆ. ಯುವ ಜನತೆಯಲ್ಲಿ ಮತದಾನದ ಕುರಿತು ಜಾಗೃತಿ ಮೂಡಿಸಲು ಯುವ ಕ್ರೀಡಾಪಟುಗಳ ಸಂದೇಶವನ್ನು ರೇಡಿಯೋ ಮತ್ತು ವೀಡಿಯೋ ಮೂಲಕ ಪ್ರಸಾರ ಮಾಡಲಾಗುವುದು. ಇದರಲ್ಲಿ  ರಿಷಬ್‌ ಪಂತ್‌ ಮತ್ತು ಟೇಬಲ್‌ ಟೆನಿಸ್‌ ಆಟಗಾರ್ತಿ ಮಣಿಕಾ ಬಾರ್ತಾ ಸೇರಿದ್ದಾರೆ. “ಮತದಾರರಲ್ಲಿ ಜಾಗೃತಿ ಮೂಡಿಸುವ ಸಲುವಾಗಿ ಜನಪ್ರಿಯ ಕ್ರೀಡಾಪಟುಗಳನ್ನು ಆಯ್ಕೆ ಮಾಡಿಕೊಳ್ಳಲಾಗಿದೆ. ಕಳೆದ ವರ್ಷಕ್ಕಿಂತ ಈ ಬಾರಿ ಮತದಾನ ಪ್ರಮಾಣವನ್ನು ಹೆಚ್ಚಿಸುವುದು ನಮ್ಮ ಗುರಿಯಾಗಿದೆ’ ಎಂದು  ರಣ್‌ಬೀರ್‌ ಸಿಂಗ್‌ ಹೇಳಿದ್ದಾರೆ.
 

Advertisement
Advertisement

Udayavani is now on Telegram. Click here to join our channel and stay updated with the latest news.

Next