Advertisement

Unemployment ಹೆಚ್ಚಳ, ಭಾರತಕ್ಕೆ ‘ಮೃತ ಕಾಲ’ ಆಗಮನ: ಕಾಂಗ್ರೆಸ್‌

12:11 AM Mar 02, 2024 | Team Udayavani |

ನವದೆಹಲಿ: ರಷ್ಯಾದ ಸೇನೆಯಲ್ಲಿ ಸಹಾಯಕರಾಗಿ ಕೆಲಸ ಮಾಡುತ್ತಿರುವ 20 ಭಾರತೀಯರು ಅಲ್ಲೇ ಸಿಲುಕಿಕೊಂಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಕಾಂಗ್ರೆಸ್‌, ದೇಶದಲ್ಲಿ “ಮೃತ ಕಾಲ’ ಆರಂಭವಾಗಿದೆ ಎಂದು ವ್ಯಂಗ ಮಾಡಿದೆ.

Advertisement

ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಕಾಂಗ್ರೆಸ್‌ನ ಪ್ರಧಾನ ಕಾರ್ಯದರ್ಶಿ ಜೈರಾಮ್‌ ರಮೇಶ್‌, “ಭಾರತದಲ್ಲಿ ನಿರುದ್ಯೋಗದ ಪ್ರಮಾಣ ಭಯಂಕರವಾಗಿ ಏರಿಕೆಯಾಗುತ್ತಿದೆ. ಹೀಗಾಗಿ ಯುವಕರು ತಮ್ಮ ಪ್ರಾಣವನ್ನು ಒತ್ತೆ ಇಟ್ಟು ವಿದೇಶಗಳಲ್ಲಿ ಯೋಧರಾಗಿ ಕೆಲಸ ಮಾಡಲು ತೆರಳುತ್ತಿದ್ದಾರೆ’ ಎಂದು ಹೇಳಿದ್ದಾರೆ.

“ರಷ್ಯಾದಲ್ಲಿ ಗುಜರಾತ್‌ನ ವ್ಯಕ್ತಿಯನ್ನು ಹತ್ಯೆ ಮಾಡಲಾಗಿದೆ. ಆದರೂ ಕೇಂದ್ರ ಸರ್ಕಾರ ಏನೂ ಮಾತನಾಡದೇ ಸುಮ್ಮನಿರುವುದು ಸರಿಯಲ್ಲ’ ಎಂದಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next