Advertisement

ಹಿಮಾಚಲ ಪ್ರದೇಶದಲ್ಲಿ ಭಾರಿ ಮಳೆ ಜನರು ತತ್ತರ: ಕೊಚ್ಚಿ ಹೋದ ಸೇತುವೆಗಳು!

09:06 AM Jul 10, 2023 | Team Udayavani |

ಹಿಮಾಚಲ ಪ್ರದೇಶ: ಹಿಮಾಚಲ ಪ್ರದೇಶದಲ್ಲಿ ವರುಣಾರ್ಭಟ ಜೋರಾಗಿದ್ದು ರಾಜ್ಯದಲ್ಲಿ ಎಡೆಬಿಡದೆ ಸುರಿಯುತ್ತಿರುವ ಮಳೆಯಿಂದಾಗಿ ಭೂಕುಸಿತ ಮತ್ತು ಪ್ರವಾಹ ಉಂಟಾಗಿದೆ. ಹಲವಾರು ರಸ್ತೆಗಳು ಸೇರಿದಂತೆ ಸೇತುವೆಗಳು ಸಹ ಕೊಚ್ಚಿಹೋಗಿವೆ.

Advertisement

ಹಿಮಾಚಲ ಪ್ರದೇಶದ ಕುಲ್ಲು ಮತ್ತು ಲಾಹೌಲ್ ಪ್ರದೇಶದಲ್ಲಿ ನದಿಗಳು ಉಕ್ಕಿ ಹರಿಯುತ್ತಿದ್ದು ಹಲವಾರು ಸೇತುವೆಗಳು ಹಾನಿಗೊಳಗಾಗಿವೆ.

ಭಾರಿ ಮಳೆಯಿಂದ ಚಂಡೀಗಢ-ಮನಾಲಿ ಹೆದ್ದಾರಿ ಸೇರಿದಂತೆ ಹಲವು ರಸ್ತೆಗಳನ್ನು ಮುಚ್ಚಲಾಗಿದೆ. ಲಾಹೌಲ್ ಮತ್ತು ಸ್ಪಿಟಿಯ ಚಂದ್ರತಾಲ್ ಸೇರಿದಂತೆ ರಾಜ್ಯದ ವಿವಿಧ ಭಾಗಗಳಲ್ಲಿ ನೂರಾರು ಜನರು ಸಿಲುಕಿಕೊಂಡಿದ್ದಾರೆ. ಅಷ್ಟು ಮಾತ್ರವಲ್ಲದೆ ಭಾರಿ ಮಳೆಯಿಂದಾಗಿ ಕನಿಷ್ಠ ಆರು ಜನರು ಸಾವನ್ನಪ್ಪಿದ್ದಾರೆ.

ಇದನ್ನೂ ಓದಿ: 

Advertisement
Advertisement

Udayavani is now on Telegram. Click here to join our channel and stay updated with the latest news.

Next