Advertisement
ಈ ವರ್ಷ ಪ್ರಥಮ ಮುಳುಗಡೆ
ಹಲವು ವರ್ಷಗಳಿಂದ ಮಳೆಗಾಲದಲ್ಲಿ ಹೊಸ್ಮಠ ಮುಳುಗು ಸೇತುವೆ ನೆರೆ ನೀರಿನಲ್ಲಿ ಮುಳುಗಡೆಯಾಗಿ ಉಪ್ಪಿನಂಗಡಿ -ಕಡಬ ರಸ್ತೆಯಲ್ಲಿ ಸಂಚರಿಸುವ ಪ್ರಯಾಣಿಕರು ತೊಂದರೆ ಅನುಭವಿಸುತ್ತಿದ್ದಾರೆ. ಈ ವರ್ಷದ ಮಳೆಗಾಲದಲ್ಲಿ ಹೊಸ್ಮಠ ಸೇತುವೆಗೆ ಇದು ಪ್ರಥಮ ಮುಳುಗಡೆ. ಸ್ಥಳೀಯವಾಗಿ ಮಳೆ ಇಲ್ಲದೇ ಇದ್ದರೂ ಘಟ್ಟದ ಮೇಲೆ ಹೆಚ್ಚಿನ ಪ್ರಮಾಣದ ಮಳೆ ಸುರಿದರೆ ಹೊಳೆಯಲ್ಲಿ ನೀರು ಉಕ್ಕಿಹರಿದು ಹೊಸ್ಮಠ ಸೇತುವೆ ಮುಳುಗಡೆಯಾಗುವುದು ಇಲ್ಲಿ ಸಾಮಾನ್ಯ.
ಹೊಸಮಠದಲ್ಲಿ ಹಳೆಯ ಮುಳುಗು ಸೇತುವೆಯ ಪಕ್ಕದಲ್ಲಿ ನೂತನ ಸೇತುವೆಯ ನಿರ್ಮಾಣ ಕಾಮಗಾರಿ 7 ಕೋಟಿ 50 ಲಕ್ಷ ರೂ. ವೆಚ್ಚದಲ್ಲಿ ನಡೆಯುತ್ತಿದೆ. ಸೇತುವೆಯ ಕಾಮಗಾರಿ ಬಹುತೇಕ ಮುಗಿದಿದ್ದರೂ ಹೊಸ ಸೇತುವೆಯ ಎರಡೂ ಬದಿಯಲ್ಲಿ ಸಂಪರ್ಕ ರಸ್ತೆ ನಿರ್ಮಾಣದ ಕೆಲಸ ಪೂರ್ತಿಯಾಗಿಲ್ಲ. ಈ ಬಾರಿಯ ಮಳೆಗಾಲದಲ್ಲಿ ಹೊಸ ಸೇತುವೆಯ ಮೇಲೆ ವಾಹನ ಸಂಚಾರಕ್ಕೆ ಅನುವುಮಾಡಿಕೊಡುವುದಾಗಿ ಅಧಿಕಾರಿಗಳು ನೀಡಿದ್ದ ಭರವಸೆಯೂ ಕೈಗೂಡಿಲ್ಲ. ಸೇತುವೆಯ ಎರಡೂ ಬದಿಯಲ್ಲಿ ನಿರ್ಮಿಸಲಾಗಿರುವ ರಕ್ಷಣಾ ಗೇಟುಗಳನ್ನು ಮುಚ್ಚಿರುವ ಪೊಲೀಸರು ಹಾಗೂ ಗೃಹರಕ್ಷಕ ಸಿಬಂದಿ ಕಾವಲು ಕಾಯುತ್ತಿದ್ದಾರೆ. ಕಂದಾಯ ಅಧಿಕಾರಿಗಳು ಹಾಗೂ ಸ್ಥಳೀಯ ಪಂಚಾಯತ್ ಪ್ರಮುಖರು ಸ್ಥಳದಲ್ಲಿದ್ದಾರೆ.