Advertisement

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಸೋಲಿಸಲು ಟಿಎಂಸಿಗೆ ಆರ್ ಜೆಡಿ ಬೆಂಬಲ..!   

07:06 PM Mar 01, 2021 | Team Udayavani |

ಕೊಲ್ಕತ್ತಾ : ಪಶ್ಚಿಮ ಬಂಗಾಳದ ವಿಧಾನ ಸಭೆ ಚುನಾವಣೆಯಲ್ಲಿ ಬಿಜೆಪಿ ಸೋಲಿಸುವ ಉದ್ದೇಶದಿಂದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನೇತೃತ್ವದ ಟಿಎಂಸಿಗೆ ಆರ್ ಜೆಡಿ ನಾಯಕ ತೇಜಸ್ವಿ ಯಾದವ್ ಬೆಂಬಲ ಸೂಚಿಸಿದ್ದಾರೆ.

Advertisement

ಇಂದು ( ಮಾರ್ಚ್ 1) ದೀದಿ ಅವರನ್ನು ಭೇಟಿ ಮಾಡಿರುವ ಯುವನಾಯಕ ಯಾದವ್ ಕೆಲಹೊತ್ತು ಮಾತುಕತೆ ನಡೆಸಿದರು. ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಅವರು, ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೆಲೆಯೂರಲು ಅವಕಾಶ ನೀಡುವುದಿಲ್ಲ. ನಮ್ಮ ಜಾತ್ಯಾತೀತ ಪಕ್ಷಗಳು ಒಗ್ಗಟ್ಟಾಗಿ ಬಿಜೆಪಿ ಸೋಲಿಸುತ್ತೇವೆ. ಮಮತಾ ಬ್ಯಾನರ್ಜಿಗೆ ನಮ್ಮ ಪಕ್ಷ ಬೆಂಬಲ ಸದಾ ಇರುತ್ತೆ ಎಂದಿದ್ದಾರೆ. ಇದೇ ವೇಳೆ ಪಶ್ಚಿಮ ಬಂಗಾಳದಲ್ಲಿ ನೆಲೆಸಿರುವ ಬಿಹಾರಿಗಳು ‘ಟಿಎಂಸಿ’ಗೆ ಮತ ನೀಡುವಂತೆ ಯಾದವ್ ಮನವಿ ಮಾಡಿದ್ದಾರೆ.

ಬಳಿಕ ಮತಾಡಿರುವ ಮಮತಾ, ಬಿಜೆಪಿ ಚುನಾವಣಾ ಆಯೋಗವನ್ನ ತಮ್ಮ ನಿಯಂತ್ರಣಕ್ಕೆ ತೆಗೆದುಕೊಳ್ಳಲು ನಮ್ಮ ಸರ್ಕಾರ ಅವಕಾಶ ನೀಡುವುದಿಲ್ಲ ಎಂದರು. ಈ ಚುನಾವಣೆಯಲ್ಲಿ ಟಿಎಂಸಿ ಹಾಗೂ ಆರ್ ಜೆಡಿ ಮೈತ್ರಿ ಮಾಡಿಕೊಳ್ಳಲಿವೆಯೇ ಎನ್ನುವ ಮಾಧ್ಯಮಗಳ ಪ್ರಶ್ನೆಗೆ ಉಭಯ ನಾಯಕರು ಯಾವುದೇ ಉತ್ತರ ನೀಡಲಿಲ್ಲ.

ಇನ್ನು ಪಶ್ಚಿಮ ಬಂಗಾಳದ ವಿಧಾನ ಸಭೆಗೆ ಐದು ಹಂತಗಳಲ್ಲಿ ಚುನಾವಣೆ ನಡೆಯಲಿದೆ. ಬಿಜೆಪಿ ಹಾಗೂ ಟಿಎಂಸಿ ನಡುವೆ ನೇರಾನೇರ ಸ್ಪರ್ಧೆ ಏರ್ಪಟ್ಟಿದೆ. ಈ ಬಾರಿ ದೀದಿಗೆ ಸೋಲಿನ ರುಚಿ ತೋರಿಸಿ ಮನೆಗೆ ಕಳುಹಿಸಲು ಬಿಜೆಪಿ ಭರ್ಜರಿ ರಣತಂತ್ರ ಹೆಣೆದಿದೆ. ಟಿಎಂಸಿ ಕೂಡ ಪಶ್ಚಿಮ ಬಂಗಾಳದಲ್ಲಿ ಬಿಜೆಪಿಯ ಚುನಾವಣಾ ತಂತ್ರಗಳಿಗೆ ಪ್ರತಿತಂತ್ರ ಹೂಡಿದೆ.

Advertisement

Udayavani is now on Telegram. Click here to join our channel and stay updated with the latest news.

Next